September 6, 2026
ಕರಾವಳಿಜಿಲ್ಲಾ ಸುದ್ದಿ

ಕಳುವಾದ ಮೊಬೈಲ್ ಫೋನ್ ಗಳನ್ನು 24 ಗಂಟೆಯಲ್ಲಿ ಶೀಘ್ರವಾಗಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಳುವಾದ/ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಫೊನ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ CEIR Portal ಅನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದ್ದು, ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ಅವುಗಳಲ್ಲಿ 4 ಮೊಬೈಲ್ ಫೋನ್ ಗಳನ್ನು CEN ಅಪರಾಧ ಪೊಲೀಸ್ ಠಾಣೆ, ಉಪ್ಪಿನಂಗಡಿ, ಪುತ್ತೂರು ಟೌನ್, ಸುಳ್ಯ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ವಾರಸುದಾರರಿಗೆ ಹಸ್ತಾoತರಿಸಿರುತ್ತಾರೆ.

ಸಾರ್ವಜನಿಕರಲ್ಲಿ ಮನವಿ:
ಮೊಬೈಲ್ ಕಳೆದುಹೋದರೆ, ಕಳುವಾದರೆ, ಸುಲಿಗೆ ಯಾದರೆ ತಕ್ಷಣವೇ E-LOST ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಸ್ವೀಕೃತಿ ಪಡೆದು ನಂತರ ಮಾಹಿತಿಯನ್ನು CEIR ಪೋರ್ಟಲ್ ನಮೂದಿಸುವುದು. ಇದರಿಂದ ಕಳೆದು ಹೋದ, ಕಳುವಾದ, ಸುಲಿಗೆ ಯಾದ ಮೊಬೈಲ್ ಫೋನ್ ಗಳ ದುರ್ಬಳಕೆ ತಡೆಗಟ್ಟಲು ಹಾಗೂ ಅವುಗಳನ್ನು ತಕ್ಷಣ ಪತ್ತೆ ಹಚ್ಚಲು ಅನುಕೂಲವಾಗುತ್ತದೆ.
ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

Related posts

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ದಕ ಎಲ್ಲಾ ಶಾಲೆ, ಪಿಯು ಕಾಲೇಜ್ ಗಳಿಗೆ ರಜೆ

Suddi Udaya
error: Content is protected !!