24 C
ಪುತ್ತೂರು, ಬೆಳ್ತಂಗಡಿ
April 3, 2025
ಕರಾವಳಿಜಿಲ್ಲಾ ಸುದ್ದಿ

ಕಳುವಾದ ಮೊಬೈಲ್ ಫೋನ್ ಗಳನ್ನು 24 ಗಂಟೆಯಲ್ಲಿ ಶೀಘ್ರವಾಗಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಳುವಾದ/ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಫೊನ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ CEIR Portal ಅನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದ್ದು, ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ಅವುಗಳಲ್ಲಿ 4 ಮೊಬೈಲ್ ಫೋನ್ ಗಳನ್ನು CEN ಅಪರಾಧ ಪೊಲೀಸ್ ಠಾಣೆ, ಉಪ್ಪಿನಂಗಡಿ, ಪುತ್ತೂರು ಟೌನ್, ಸುಳ್ಯ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ವಾರಸುದಾರರಿಗೆ ಹಸ್ತಾoತರಿಸಿರುತ್ತಾರೆ.

ಸಾರ್ವಜನಿಕರಲ್ಲಿ ಮನವಿ:
ಮೊಬೈಲ್ ಕಳೆದುಹೋದರೆ, ಕಳುವಾದರೆ, ಸುಲಿಗೆ ಯಾದರೆ ತಕ್ಷಣವೇ E-LOST ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಸ್ವೀಕೃತಿ ಪಡೆದು ನಂತರ ಮಾಹಿತಿಯನ್ನು CEIR ಪೋರ್ಟಲ್ ನಮೂದಿಸುವುದು. ಇದರಿಂದ ಕಳೆದು ಹೋದ, ಕಳುವಾದ, ಸುಲಿಗೆ ಯಾದ ಮೊಬೈಲ್ ಫೋನ್ ಗಳ ದುರ್ಬಳಕೆ ತಡೆಗಟ್ಟಲು ಹಾಗೂ ಅವುಗಳನ್ನು ತಕ್ಷಣ ಪತ್ತೆ ಹಚ್ಚಲು ಅನುಕೂಲವಾಗುತ್ತದೆ.
ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

Related posts

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
error: Content is protected !!