July 23, 2026
ಕರಾವಳಿಜಿಲ್ಲಾ ಸುದ್ದಿ

ಕಳುವಾದ ಮೊಬೈಲ್ ಫೋನ್ ಗಳನ್ನು 24 ಗಂಟೆಯಲ್ಲಿ ಶೀಘ್ರವಾಗಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಳುವಾದ/ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಫೊನ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ CEIR Portal ಅನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದ್ದು, ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ಅವುಗಳಲ್ಲಿ 4 ಮೊಬೈಲ್ ಫೋನ್ ಗಳನ್ನು CEN ಅಪರಾಧ ಪೊಲೀಸ್ ಠಾಣೆ, ಉಪ್ಪಿನಂಗಡಿ, ಪುತ್ತೂರು ಟೌನ್, ಸುಳ್ಯ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ವಾರಸುದಾರರಿಗೆ ಹಸ್ತಾoತರಿಸಿರುತ್ತಾರೆ.

ಸಾರ್ವಜನಿಕರಲ್ಲಿ ಮನವಿ:
ಮೊಬೈಲ್ ಕಳೆದುಹೋದರೆ, ಕಳುವಾದರೆ, ಸುಲಿಗೆ ಯಾದರೆ ತಕ್ಷಣವೇ E-LOST ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಸ್ವೀಕೃತಿ ಪಡೆದು ನಂತರ ಮಾಹಿತಿಯನ್ನು CEIR ಪೋರ್ಟಲ್ ನಮೂದಿಸುವುದು. ಇದರಿಂದ ಕಳೆದು ಹೋದ, ಕಳುವಾದ, ಸುಲಿಗೆ ಯಾದ ಮೊಬೈಲ್ ಫೋನ್ ಗಳ ದುರ್ಬಳಕೆ ತಡೆಗಟ್ಟಲು ಹಾಗೂ ಅವುಗಳನ್ನು ತಕ್ಷಣ ಪತ್ತೆ ಹಚ್ಚಲು ಅನುಕೂಲವಾಗುತ್ತದೆ.
ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

Related posts

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಆದ್ಯಪಾಡಿ:ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಮಹಾ ಚಂಡಿಕಾ ಯಾಗ ಧಾರ್ಮಿಕ ಸಭೆ

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya
error: Content is protected !!