September 6, 2026
ಕರಾವಳಿಜಿಲ್ಲಾ ಸುದ್ದಿ

ಕಳುವಾದ ಮೊಬೈಲ್ ಫೋನ್ ಗಳನ್ನು 24 ಗಂಟೆಯಲ್ಲಿ ಶೀಘ್ರವಾಗಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಳುವಾದ/ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಫೊನ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ CEIR Portal ಅನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದ್ದು, ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ಅವುಗಳಲ್ಲಿ 4 ಮೊಬೈಲ್ ಫೋನ್ ಗಳನ್ನು CEN ಅಪರಾಧ ಪೊಲೀಸ್ ಠಾಣೆ, ಉಪ್ಪಿನಂಗಡಿ, ಪುತ್ತೂರು ಟೌನ್, ಸುಳ್ಯ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ವಾರಸುದಾರರಿಗೆ ಹಸ್ತಾoತರಿಸಿರುತ್ತಾರೆ.

ಸಾರ್ವಜನಿಕರಲ್ಲಿ ಮನವಿ:
ಮೊಬೈಲ್ ಕಳೆದುಹೋದರೆ, ಕಳುವಾದರೆ, ಸುಲಿಗೆ ಯಾದರೆ ತಕ್ಷಣವೇ E-LOST ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಸ್ವೀಕೃತಿ ಪಡೆದು ನಂತರ ಮಾಹಿತಿಯನ್ನು CEIR ಪೋರ್ಟಲ್ ನಮೂದಿಸುವುದು. ಇದರಿಂದ ಕಳೆದು ಹೋದ, ಕಳುವಾದ, ಸುಲಿಗೆ ಯಾದ ಮೊಬೈಲ್ ಫೋನ್ ಗಳ ದುರ್ಬಳಕೆ ತಡೆಗಟ್ಟಲು ಹಾಗೂ ಅವುಗಳನ್ನು ತಕ್ಷಣ ಪತ್ತೆ ಹಚ್ಚಲು ಅನುಕೂಲವಾಗುತ್ತದೆ.
ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಯಾತ್ರಾರ್ಥಿಯಾಗಿ ಬಂದಿದ್ದ ವೃದ್ಧೆಗೆ ಜ್ಯೂಸ್ ನೀಡಿ ಚಿನ್ನಾಭರಣ ಎಗರಿಸಿದ ಅಪರಿಚಿತ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya
error: Content is protected !!