July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

ಬೆಳ್ತಂಗಡಿ : ದಿನದಿಂದ ದಿನೇ ಬಿಸಿಲಿನ ತಾಪ ಹೆಚ್ಚಾಗುತಿದ್ದು ಅಲ್ಲಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಫೆ 26 ಮಧ್ಯಾಹ್ನ ಗುಡ್ಡಕ್ಕೆ ಬೆಂಕಿ ಬಿದಿದ್ದು ಸಮೀಪದ  ರಬ್ಬರ್ ತೋಟಕ್ಕೂ ಬೆಂಕಿ ವ್ಯಾಪಿಸಿದೆ. ಸ್ಥಳೀಯರು ಅಗ್ನಿಶಾಮಕ

ಇಲಾಖೆಗೆ ಮಾಹಿತಿ ನೀಡಿದರು.ಅಗ್ನಿ ಶಾಮಕ ದಳ ಹಾಗೂ ಸ್ಥಳೀಯರು ನಂದಿಸುವ ಕಾರ್ಯ ಮಾಡಿದರೂ ಬೆಂಕಿ ಅವಾಗಲೇಎರಡು ಎಕರೆ ರಬ್ಬರ್ ಗುಡ್ಡ ಸೇರಿದಂತೆ 5 ಎಕರೆಯಷ್ಟು ಗುಡ್ಡದಲ್ಲಿ ಬೆಂಕಿ ವ್ಯಾಪಿಸಿದೆ.ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ ಈಗಾಗಲೇ ಎರಡು  ಅಗ್ನಿಶಾಮಕ ಇಲಾಖೆಯ ತಂಡಗಳು, ಲಾಯಿಲ ಗ್ರಾಮ 

ಪಂಚಾಯತ್ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಶತಪ್ರಯತ್ನ ಮಾಡುತಿದ್ದಾರೆ.ಕಳೆದ ವಾರವಷ್ಟೇ ಲಾಯಿಲ ಗ್ರಾಮದ ಪಡ್ಲಾಡಿ ಎಂಬಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಅಗ್ನಿಶಾಮಕ ಇಲಾಖೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿತ್ತು. ಸ್ಥಳೀಯರ ಸಮಯಪ್ರಜ್ಙೆಯಿಂದ ದೊಡ್ಡ ಅನಾಹುತ ತಪ್ಪಿತ್ತು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!