July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

ಬೆಳ್ತಂಗಡಿ : ದಿನದಿಂದ ದಿನೇ ಬಿಸಿಲಿನ ತಾಪ ಹೆಚ್ಚಾಗುತಿದ್ದು ಅಲ್ಲಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಫೆ 26 ಮಧ್ಯಾಹ್ನ ಗುಡ್ಡಕ್ಕೆ ಬೆಂಕಿ ಬಿದಿದ್ದು ಸಮೀಪದ  ರಬ್ಬರ್ ತೋಟಕ್ಕೂ ಬೆಂಕಿ ವ್ಯಾಪಿಸಿದೆ. ಸ್ಥಳೀಯರು ಅಗ್ನಿಶಾಮಕ

ಇಲಾಖೆಗೆ ಮಾಹಿತಿ ನೀಡಿದರು.ಅಗ್ನಿ ಶಾಮಕ ದಳ ಹಾಗೂ ಸ್ಥಳೀಯರು ನಂದಿಸುವ ಕಾರ್ಯ ಮಾಡಿದರೂ ಬೆಂಕಿ ಅವಾಗಲೇಎರಡು ಎಕರೆ ರಬ್ಬರ್ ಗುಡ್ಡ ಸೇರಿದಂತೆ 5 ಎಕರೆಯಷ್ಟು ಗುಡ್ಡದಲ್ಲಿ ಬೆಂಕಿ ವ್ಯಾಪಿಸಿದೆ.ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ ಈಗಾಗಲೇ ಎರಡು  ಅಗ್ನಿಶಾಮಕ ಇಲಾಖೆಯ ತಂಡಗಳು, ಲಾಯಿಲ ಗ್ರಾಮ 

ಪಂಚಾಯತ್ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಶತಪ್ರಯತ್ನ ಮಾಡುತಿದ್ದಾರೆ.ಕಳೆದ ವಾರವಷ್ಟೇ ಲಾಯಿಲ ಗ್ರಾಮದ ಪಡ್ಲಾಡಿ ಎಂಬಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಅಗ್ನಿಶಾಮಕ ಇಲಾಖೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿತ್ತು. ಸ್ಥಳೀಯರ ಸಮಯಪ್ರಜ್ಙೆಯಿಂದ ದೊಡ್ಡ ಅನಾಹುತ ತಪ್ಪಿತ್ತು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಶಕ್ತರಿಗೆ ಆರ್ಥಿಕ ಸಹಕಾರ, 500 ಗಿಡಗಳ ವಿತರಣೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಕ್ತಿಗೀತೆ ಬಿಡುಗಡೆ

Suddi Udaya
error: Content is protected !!