March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

ಉಜಿರೆ: ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಸ್ತ್ರೀ ರೋಗ ತಜ್ಞೆ ಡಾ. ಅಂಕಿತ ಜಿ ಭಟ್ ಅವರು ಮಹಿಳೆಯೊಬ್ಬರ ಗರ್ಭಕೋಶದ ದೊಡ್ಡ ಗಾತ್ರದ ಗಡ್ಡೆಯನ್ನು ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಫೆ.೨೭ರಂದು ಹೊರತೆಗೆದಿದ್ದಾರೆ.


೪೩ವರ್ಷದ ಮಹಿಳೆ ೬ ತಿಂಗಳ ಗರ್ಭಿಣಿ ಹಾಗೆ ಇದ್ದ ಪರಿಣಾಮ ತಪಾಸಣೆಗೆ ಒಳಪಡಿಸಿದಾಗ ಗಡ್ಡೆ ಕಂಡು ಬಂದಿತ್ತು.
ಗರ್ಭಕೋಶದ ಗಡ್ಡೆಯನ್ನು ಸ್ತ್ರೀ ರೋಗ ತಜ್ಞೆ ಡಾ.ಅಂಕಿತ.ಜಿ.ಭಟ್ ಇವರು ಚಿಕಿತ್ಸೆಯಲ್ಲಿ ಸತತ ಪ್ರಯತ್ನದ ಮೂಲಕ ಯಶಸ್ವಿಯಾಗಿ ಕೀ ರಂದ್ರ ಚಿಕಿತ್ಸೆ (Lap hysterectomy ) ನೆರವೇರಿಸಿ ಸುಮಾರು ೧.೬kg ಗಾತ್ರದ ಮಾಂಸ ಗಡ್ಡೆಯನ್ನು ಹೊರತೆಗೆದಿದ್ದಾರೆ.ಇದೀಗ ರೋಗಿ ಶಸ್ತ್ರಚಿಕಿತ್ಸೆಯ ೪ ಗಂಟೆಗಳ ನಂತರ ನಡೆದಾಡಲು ಶಕ್ತರಾಗಿದ್ದಾರೆ.
ತನ್ನ ಕಿರಿ ವಯಸ್ಸಿನಲ್ಲಿ ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ಯನ್ನು ನೆರವೇರಿಸಿದ ಇವರ ಸಾಧನೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.ಕಳೆದ ಎರಡು ದಶಕಗಳಿಂದ ಉಜಿರೆಯಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ನೀಡುತ್ತಿರುವ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ NABH ಮಾನ್ಯತೆ ಪಡೆದಿದೆ.
ರೋಗಿಗಳಿಗೆ ಅತ್ಯುತ್ತಮ ಸೇವೆ ಸೇರಿದಂತೆ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದ ಆಸ್ಪತ್ರೆಯಲ್ಲಿ ಅತ್ಯಂತ ಅಪರೂಪದ ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿರುವುದು ಮತ್ತೊಂದು ಗರಿಮೆಗೆ ಒಳಗಾಗಿದೆ.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya
error: Content is protected !!