July 25, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

ಉಜಿರೆ: ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಸ್ತ್ರೀ ರೋಗ ತಜ್ಞೆ ಡಾ. ಅಂಕಿತ ಜಿ ಭಟ್ ಅವರು ಮಹಿಳೆಯೊಬ್ಬರ ಗರ್ಭಕೋಶದ ದೊಡ್ಡ ಗಾತ್ರದ ಗಡ್ಡೆಯನ್ನು ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಫೆ.೨೭ರಂದು ಹೊರತೆಗೆದಿದ್ದಾರೆ.


೪೩ವರ್ಷದ ಮಹಿಳೆ ೬ ತಿಂಗಳ ಗರ್ಭಿಣಿ ಹಾಗೆ ಇದ್ದ ಪರಿಣಾಮ ತಪಾಸಣೆಗೆ ಒಳಪಡಿಸಿದಾಗ ಗಡ್ಡೆ ಕಂಡು ಬಂದಿತ್ತು.
ಗರ್ಭಕೋಶದ ಗಡ್ಡೆಯನ್ನು ಸ್ತ್ರೀ ರೋಗ ತಜ್ಞೆ ಡಾ.ಅಂಕಿತ.ಜಿ.ಭಟ್ ಇವರು ಚಿಕಿತ್ಸೆಯಲ್ಲಿ ಸತತ ಪ್ರಯತ್ನದ ಮೂಲಕ ಯಶಸ್ವಿಯಾಗಿ ಕೀ ರಂದ್ರ ಚಿಕಿತ್ಸೆ (Lap hysterectomy ) ನೆರವೇರಿಸಿ ಸುಮಾರು ೧.೬kg ಗಾತ್ರದ ಮಾಂಸ ಗಡ್ಡೆಯನ್ನು ಹೊರತೆಗೆದಿದ್ದಾರೆ.ಇದೀಗ ರೋಗಿ ಶಸ್ತ್ರಚಿಕಿತ್ಸೆಯ ೪ ಗಂಟೆಗಳ ನಂತರ ನಡೆದಾಡಲು ಶಕ್ತರಾಗಿದ್ದಾರೆ.
ತನ್ನ ಕಿರಿ ವಯಸ್ಸಿನಲ್ಲಿ ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ಯನ್ನು ನೆರವೇರಿಸಿದ ಇವರ ಸಾಧನೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.ಕಳೆದ ಎರಡು ದಶಕಗಳಿಂದ ಉಜಿರೆಯಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ನೀಡುತ್ತಿರುವ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ NABH ಮಾನ್ಯತೆ ಪಡೆದಿದೆ.
ರೋಗಿಗಳಿಗೆ ಅತ್ಯುತ್ತಮ ಸೇವೆ ಸೇರಿದಂತೆ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದ ಆಸ್ಪತ್ರೆಯಲ್ಲಿ ಅತ್ಯಂತ ಅಪರೂಪದ ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿರುವುದು ಮತ್ತೊಂದು ಗರಿಮೆಗೆ ಒಳಗಾಗಿದೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya

ಡಾ. ಎಂ. ಮೋಹನ್ ಆಳ್ವರಿಗೆ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ ಫೆಲೋಶಿಪ್ ಗೌರವ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya
error: Content is protected !!