25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

ಉಜಿರೆ: ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಸ್ತ್ರೀ ರೋಗ ತಜ್ಞೆ ಡಾ. ಅಂಕಿತ ಜಿ ಭಟ್ ಅವರು ಮಹಿಳೆಯೊಬ್ಬರ ಗರ್ಭಕೋಶದ ದೊಡ್ಡ ಗಾತ್ರದ ಗಡ್ಡೆಯನ್ನು ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಫೆ.೨೭ರಂದು ಹೊರತೆಗೆದಿದ್ದಾರೆ.


೪೩ವರ್ಷದ ಮಹಿಳೆ ೬ ತಿಂಗಳ ಗರ್ಭಿಣಿ ಹಾಗೆ ಇದ್ದ ಪರಿಣಾಮ ತಪಾಸಣೆಗೆ ಒಳಪಡಿಸಿದಾಗ ಗಡ್ಡೆ ಕಂಡು ಬಂದಿತ್ತು.
ಗರ್ಭಕೋಶದ ಗಡ್ಡೆಯನ್ನು ಸ್ತ್ರೀ ರೋಗ ತಜ್ಞೆ ಡಾ.ಅಂಕಿತ.ಜಿ.ಭಟ್ ಇವರು ಚಿಕಿತ್ಸೆಯಲ್ಲಿ ಸತತ ಪ್ರಯತ್ನದ ಮೂಲಕ ಯಶಸ್ವಿಯಾಗಿ ಕೀ ರಂದ್ರ ಚಿಕಿತ್ಸೆ (Lap hysterectomy ) ನೆರವೇರಿಸಿ ಸುಮಾರು ೧.೬kg ಗಾತ್ರದ ಮಾಂಸ ಗಡ್ಡೆಯನ್ನು ಹೊರತೆಗೆದಿದ್ದಾರೆ.ಇದೀಗ ರೋಗಿ ಶಸ್ತ್ರಚಿಕಿತ್ಸೆಯ ೪ ಗಂಟೆಗಳ ನಂತರ ನಡೆದಾಡಲು ಶಕ್ತರಾಗಿದ್ದಾರೆ.
ತನ್ನ ಕಿರಿ ವಯಸ್ಸಿನಲ್ಲಿ ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ಯನ್ನು ನೆರವೇರಿಸಿದ ಇವರ ಸಾಧನೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.ಕಳೆದ ಎರಡು ದಶಕಗಳಿಂದ ಉಜಿರೆಯಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ನೀಡುತ್ತಿರುವ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ NABH ಮಾನ್ಯತೆ ಪಡೆದಿದೆ.
ರೋಗಿಗಳಿಗೆ ಅತ್ಯುತ್ತಮ ಸೇವೆ ಸೇರಿದಂತೆ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದ ಆಸ್ಪತ್ರೆಯಲ್ಲಿ ಅತ್ಯಂತ ಅಪರೂಪದ ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿರುವುದು ಮತ್ತೊಂದು ಗರಿಮೆಗೆ ಒಳಗಾಗಿದೆ.

Related posts

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Suddi Udaya
error: Content is protected !!