23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

ಬೆಳ್ತಂಗಡಿ: ಫೆ. 28 ರಂದು ಪಿಲಿಗೂಡು ಉನ್ನತಿಕರಿಸಿದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿಯ ಕುರಿತು ಬೆಳಕು ಎನ್ನುವ ಹೆಸರಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿ ಬಹುಮುಖ ಪ್ರತಿಭೆಯ ಚಂದ್ರಹಾಸ್ ಬಳಂಜ ನಡೆಸಿಕೊಟ್ಟರು.

ಬಹುಮುಖ ಪ್ರತಿಭೆಯುಳ್ಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿ ಸಂಯೋಜಕಿ ಜೆಸಿ ಮಮಿತಾ ಸುಧೀರ್ ವಹಿಸಿಕೊಂಡರು.

ಮುಖ್ಯ ಅತಿಥಿಯಾಗಿ ಪಿಲಿಗೂಡು ಸರ್ಕಾರಿ ಉನ್ನತೀಕರಿಸಿದ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಅನಿತಾ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ಸಭೆಗೆ ಪರಿಚಯಿಸಿದರು.
ಮಹಿಳಾ ವಿಭಾಗದ ನಿರ್ದೇಶಕರಾದ ಶ್ರೀಮತಿ ಸುಭಾಷಿಣಿ ಗೌರವಾನ್ವಿತರನ್ನ ವೇದಿಕೆಗೆ ಆಹ್ವಾನಿಸಿದರು. ಜೆಜೆಸಿ ಸೃಷ್ಟಿ ಜೆಸಿ ವಾಣಿ ವಾಚಿಸಿದರು. ಜಿಸಿಐ ಬೆಳ್ತಂಗಡಿ ಮಂಜುಶ್ರೀ ಕಾರ್ಯದರ್ಶಿ ಜೆಸಿ ಸುಧೀರ್ ಕೆ ಎನ್ ಸರ್ವರಿಗೂ ವಂದಿಸಿದರು.

Related posts

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya
error: Content is protected !!