30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

ಉಜಿರೆ: ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಸ್ತ್ರೀ ರೋಗ ತಜ್ಞೆ ಡಾ. ಅಂಕಿತ ಜಿ ಭಟ್ ಅವರು ಮಹಿಳೆಯೊಬ್ಬರ ಗರ್ಭಕೋಶದ ದೊಡ್ಡ ಗಾತ್ರದ ಗಡ್ಡೆಯನ್ನು ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಫೆ.೨೭ರಂದು ಹೊರತೆಗೆದಿದ್ದಾರೆ.


೪೩ವರ್ಷದ ಮಹಿಳೆ ೬ ತಿಂಗಳ ಗರ್ಭಿಣಿ ಹಾಗೆ ಇದ್ದ ಪರಿಣಾಮ ತಪಾಸಣೆಗೆ ಒಳಪಡಿಸಿದಾಗ ಗಡ್ಡೆ ಕಂಡು ಬಂದಿತ್ತು.
ಗರ್ಭಕೋಶದ ಗಡ್ಡೆಯನ್ನು ಸ್ತ್ರೀ ರೋಗ ತಜ್ಞೆ ಡಾ.ಅಂಕಿತ.ಜಿ.ಭಟ್ ಇವರು ಚಿಕಿತ್ಸೆಯಲ್ಲಿ ಸತತ ಪ್ರಯತ್ನದ ಮೂಲಕ ಯಶಸ್ವಿಯಾಗಿ ಕೀ ರಂದ್ರ ಚಿಕಿತ್ಸೆ (Lap hysterectomy ) ನೆರವೇರಿಸಿ ಸುಮಾರು ೧.೬kg ಗಾತ್ರದ ಮಾಂಸ ಗಡ್ಡೆಯನ್ನು ಹೊರತೆಗೆದಿದ್ದಾರೆ.ಇದೀಗ ರೋಗಿ ಶಸ್ತ್ರಚಿಕಿತ್ಸೆಯ ೪ ಗಂಟೆಗಳ ನಂತರ ನಡೆದಾಡಲು ಶಕ್ತರಾಗಿದ್ದಾರೆ.
ತನ್ನ ಕಿರಿ ವಯಸ್ಸಿನಲ್ಲಿ ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ಯನ್ನು ನೆರವೇರಿಸಿದ ಇವರ ಸಾಧನೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.ಕಳೆದ ಎರಡು ದಶಕಗಳಿಂದ ಉಜಿರೆಯಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ನೀಡುತ್ತಿರುವ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ NABH ಮಾನ್ಯತೆ ಪಡೆದಿದೆ.
ರೋಗಿಗಳಿಗೆ ಅತ್ಯುತ್ತಮ ಸೇವೆ ಸೇರಿದಂತೆ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದ ಆಸ್ಪತ್ರೆಯಲ್ಲಿ ಅತ್ಯಂತ ಅಪರೂಪದ ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿರುವುದು ಮತ್ತೊಂದು ಗರಿಮೆಗೆ ಒಳಗಾಗಿದೆ.

Related posts

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya
error: Content is protected !!