22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

ಉಜಿರೆ: ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಸ್ತ್ರೀ ರೋಗ ತಜ್ಞೆ ಡಾ. ಅಂಕಿತ ಜಿ ಭಟ್ ಅವರು ಮಹಿಳೆಯೊಬ್ಬರ ಗರ್ಭಕೋಶದ ದೊಡ್ಡ ಗಾತ್ರದ ಗಡ್ಡೆಯನ್ನು ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಫೆ.೨೭ರಂದು ಹೊರತೆಗೆದಿದ್ದಾರೆ.


೪೩ವರ್ಷದ ಮಹಿಳೆ ೬ ತಿಂಗಳ ಗರ್ಭಿಣಿ ಹಾಗೆ ಇದ್ದ ಪರಿಣಾಮ ತಪಾಸಣೆಗೆ ಒಳಪಡಿಸಿದಾಗ ಗಡ್ಡೆ ಕಂಡು ಬಂದಿತ್ತು.
ಗರ್ಭಕೋಶದ ಗಡ್ಡೆಯನ್ನು ಸ್ತ್ರೀ ರೋಗ ತಜ್ಞೆ ಡಾ.ಅಂಕಿತ.ಜಿ.ಭಟ್ ಇವರು ಚಿಕಿತ್ಸೆಯಲ್ಲಿ ಸತತ ಪ್ರಯತ್ನದ ಮೂಲಕ ಯಶಸ್ವಿಯಾಗಿ ಕೀ ರಂದ್ರ ಚಿಕಿತ್ಸೆ (Lap hysterectomy ) ನೆರವೇರಿಸಿ ಸುಮಾರು ೧.೬kg ಗಾತ್ರದ ಮಾಂಸ ಗಡ್ಡೆಯನ್ನು ಹೊರತೆಗೆದಿದ್ದಾರೆ.ಇದೀಗ ರೋಗಿ ಶಸ್ತ್ರಚಿಕಿತ್ಸೆಯ ೪ ಗಂಟೆಗಳ ನಂತರ ನಡೆದಾಡಲು ಶಕ್ತರಾಗಿದ್ದಾರೆ.
ತನ್ನ ಕಿರಿ ವಯಸ್ಸಿನಲ್ಲಿ ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ಯನ್ನು ನೆರವೇರಿಸಿದ ಇವರ ಸಾಧನೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.ಕಳೆದ ಎರಡು ದಶಕಗಳಿಂದ ಉಜಿರೆಯಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ನೀಡುತ್ತಿರುವ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ NABH ಮಾನ್ಯತೆ ಪಡೆದಿದೆ.
ರೋಗಿಗಳಿಗೆ ಅತ್ಯುತ್ತಮ ಸೇವೆ ಸೇರಿದಂತೆ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದ ಆಸ್ಪತ್ರೆಯಲ್ಲಿ ಅತ್ಯಂತ ಅಪರೂಪದ ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿರುವುದು ಮತ್ತೊಂದು ಗರಿಮೆಗೆ ಒಳಗಾಗಿದೆ.

Related posts

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya
error: Content is protected !!