26.4 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

ಉಜಿರೆ: ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಸ್ತ್ರೀ ರೋಗ ತಜ್ಞೆ ಡಾ. ಅಂಕಿತ ಜಿ ಭಟ್ ಅವರು ಮಹಿಳೆಯೊಬ್ಬರ ಗರ್ಭಕೋಶದ ದೊಡ್ಡ ಗಾತ್ರದ ಗಡ್ಡೆಯನ್ನು ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಫೆ.೨೭ರಂದು ಹೊರತೆಗೆದಿದ್ದಾರೆ.


೪೩ವರ್ಷದ ಮಹಿಳೆ ೬ ತಿಂಗಳ ಗರ್ಭಿಣಿ ಹಾಗೆ ಇದ್ದ ಪರಿಣಾಮ ತಪಾಸಣೆಗೆ ಒಳಪಡಿಸಿದಾಗ ಗಡ್ಡೆ ಕಂಡು ಬಂದಿತ್ತು.
ಗರ್ಭಕೋಶದ ಗಡ್ಡೆಯನ್ನು ಸ್ತ್ರೀ ರೋಗ ತಜ್ಞೆ ಡಾ.ಅಂಕಿತ.ಜಿ.ಭಟ್ ಇವರು ಚಿಕಿತ್ಸೆಯಲ್ಲಿ ಸತತ ಪ್ರಯತ್ನದ ಮೂಲಕ ಯಶಸ್ವಿಯಾಗಿ ಕೀ ರಂದ್ರ ಚಿಕಿತ್ಸೆ (Lap hysterectomy ) ನೆರವೇರಿಸಿ ಸುಮಾರು ೧.೬kg ಗಾತ್ರದ ಮಾಂಸ ಗಡ್ಡೆಯನ್ನು ಹೊರತೆಗೆದಿದ್ದಾರೆ.ಇದೀಗ ರೋಗಿ ಶಸ್ತ್ರಚಿಕಿತ್ಸೆಯ ೪ ಗಂಟೆಗಳ ನಂತರ ನಡೆದಾಡಲು ಶಕ್ತರಾಗಿದ್ದಾರೆ.
ತನ್ನ ಕಿರಿ ವಯಸ್ಸಿನಲ್ಲಿ ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ಯನ್ನು ನೆರವೇರಿಸಿದ ಇವರ ಸಾಧನೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.ಕಳೆದ ಎರಡು ದಶಕಗಳಿಂದ ಉಜಿರೆಯಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ನೀಡುತ್ತಿರುವ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ NABH ಮಾನ್ಯತೆ ಪಡೆದಿದೆ.
ರೋಗಿಗಳಿಗೆ ಅತ್ಯುತ್ತಮ ಸೇವೆ ಸೇರಿದಂತೆ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದ ಆಸ್ಪತ್ರೆಯಲ್ಲಿ ಅತ್ಯಂತ ಅಪರೂಪದ ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿರುವುದು ಮತ್ತೊಂದು ಗರಿಮೆಗೆ ಒಳಗಾಗಿದೆ.

Related posts

ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ಜಮಾಬಂದಿ ಕಾರ್ಯಕ್ರಮ

Suddi Udaya

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya
error: Content is protected !!