23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

ಉಜಿರೆ: ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಸ್ತ್ರೀ ರೋಗ ತಜ್ಞೆ ಡಾ. ಅಂಕಿತ ಜಿ ಭಟ್ ಅವರು ಮಹಿಳೆಯೊಬ್ಬರ ಗರ್ಭಕೋಶದ ದೊಡ್ಡ ಗಾತ್ರದ ಗಡ್ಡೆಯನ್ನು ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಫೆ.೨೭ರಂದು ಹೊರತೆಗೆದಿದ್ದಾರೆ.


೪೩ವರ್ಷದ ಮಹಿಳೆ ೬ ತಿಂಗಳ ಗರ್ಭಿಣಿ ಹಾಗೆ ಇದ್ದ ಪರಿಣಾಮ ತಪಾಸಣೆಗೆ ಒಳಪಡಿಸಿದಾಗ ಗಡ್ಡೆ ಕಂಡು ಬಂದಿತ್ತು.
ಗರ್ಭಕೋಶದ ಗಡ್ಡೆಯನ್ನು ಸ್ತ್ರೀ ರೋಗ ತಜ್ಞೆ ಡಾ.ಅಂಕಿತ.ಜಿ.ಭಟ್ ಇವರು ಚಿಕಿತ್ಸೆಯಲ್ಲಿ ಸತತ ಪ್ರಯತ್ನದ ಮೂಲಕ ಯಶಸ್ವಿಯಾಗಿ ಕೀ ರಂದ್ರ ಚಿಕಿತ್ಸೆ (Lap hysterectomy ) ನೆರವೇರಿಸಿ ಸುಮಾರು ೧.೬kg ಗಾತ್ರದ ಮಾಂಸ ಗಡ್ಡೆಯನ್ನು ಹೊರತೆಗೆದಿದ್ದಾರೆ.ಇದೀಗ ರೋಗಿ ಶಸ್ತ್ರಚಿಕಿತ್ಸೆಯ ೪ ಗಂಟೆಗಳ ನಂತರ ನಡೆದಾಡಲು ಶಕ್ತರಾಗಿದ್ದಾರೆ.
ತನ್ನ ಕಿರಿ ವಯಸ್ಸಿನಲ್ಲಿ ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ಯನ್ನು ನೆರವೇರಿಸಿದ ಇವರ ಸಾಧನೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.ಕಳೆದ ಎರಡು ದಶಕಗಳಿಂದ ಉಜಿರೆಯಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ನೀಡುತ್ತಿರುವ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ NABH ಮಾನ್ಯತೆ ಪಡೆದಿದೆ.
ರೋಗಿಗಳಿಗೆ ಅತ್ಯುತ್ತಮ ಸೇವೆ ಸೇರಿದಂತೆ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದ ಆಸ್ಪತ್ರೆಯಲ್ಲಿ ಅತ್ಯಂತ ಅಪರೂಪದ ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿರುವುದು ಮತ್ತೊಂದು ಗರಿಮೆಗೆ ಒಳಗಾಗಿದೆ.

Related posts

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya
error: Content is protected !!