24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

ಉಜಿರೆ: ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಸ್ತ್ರೀ ರೋಗ ತಜ್ಞೆ ಡಾ. ಅಂಕಿತ ಜಿ ಭಟ್ ಅವರು ಮಹಿಳೆಯೊಬ್ಬರ ಗರ್ಭಕೋಶದ ದೊಡ್ಡ ಗಾತ್ರದ ಗಡ್ಡೆಯನ್ನು ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಫೆ.೨೭ರಂದು ಹೊರತೆಗೆದಿದ್ದಾರೆ.


೪೩ವರ್ಷದ ಮಹಿಳೆ ೬ ತಿಂಗಳ ಗರ್ಭಿಣಿ ಹಾಗೆ ಇದ್ದ ಪರಿಣಾಮ ತಪಾಸಣೆಗೆ ಒಳಪಡಿಸಿದಾಗ ಗಡ್ಡೆ ಕಂಡು ಬಂದಿತ್ತು.
ಗರ್ಭಕೋಶದ ಗಡ್ಡೆಯನ್ನು ಸ್ತ್ರೀ ರೋಗ ತಜ್ಞೆ ಡಾ.ಅಂಕಿತ.ಜಿ.ಭಟ್ ಇವರು ಚಿಕಿತ್ಸೆಯಲ್ಲಿ ಸತತ ಪ್ರಯತ್ನದ ಮೂಲಕ ಯಶಸ್ವಿಯಾಗಿ ಕೀ ರಂದ್ರ ಚಿಕಿತ್ಸೆ (Lap hysterectomy ) ನೆರವೇರಿಸಿ ಸುಮಾರು ೧.೬kg ಗಾತ್ರದ ಮಾಂಸ ಗಡ್ಡೆಯನ್ನು ಹೊರತೆಗೆದಿದ್ದಾರೆ.ಇದೀಗ ರೋಗಿ ಶಸ್ತ್ರಚಿಕಿತ್ಸೆಯ ೪ ಗಂಟೆಗಳ ನಂತರ ನಡೆದಾಡಲು ಶಕ್ತರಾಗಿದ್ದಾರೆ.
ತನ್ನ ಕಿರಿ ವಯಸ್ಸಿನಲ್ಲಿ ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ಯನ್ನು ನೆರವೇರಿಸಿದ ಇವರ ಸಾಧನೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.ಕಳೆದ ಎರಡು ದಶಕಗಳಿಂದ ಉಜಿರೆಯಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ನೀಡುತ್ತಿರುವ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ NABH ಮಾನ್ಯತೆ ಪಡೆದಿದೆ.
ರೋಗಿಗಳಿಗೆ ಅತ್ಯುತ್ತಮ ಸೇವೆ ಸೇರಿದಂತೆ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದ ಆಸ್ಪತ್ರೆಯಲ್ಲಿ ಅತ್ಯಂತ ಅಪರೂಪದ ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿರುವುದು ಮತ್ತೊಂದು ಗರಿಮೆಗೆ ಒಳಗಾಗಿದೆ.

Related posts

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ‌ ದೂರು

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya
error: Content is protected !!