April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

ಉಜಿರೆ: ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಸ್ತ್ರೀ ರೋಗ ತಜ್ಞೆ ಡಾ. ಅಂಕಿತ ಜಿ ಭಟ್ ಅವರು ಮಹಿಳೆಯೊಬ್ಬರ ಗರ್ಭಕೋಶದ ದೊಡ್ಡ ಗಾತ್ರದ ಗಡ್ಡೆಯನ್ನು ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಫೆ.೨೭ರಂದು ಹೊರತೆಗೆದಿದ್ದಾರೆ.


೪೩ವರ್ಷದ ಮಹಿಳೆ ೬ ತಿಂಗಳ ಗರ್ಭಿಣಿ ಹಾಗೆ ಇದ್ದ ಪರಿಣಾಮ ತಪಾಸಣೆಗೆ ಒಳಪಡಿಸಿದಾಗ ಗಡ್ಡೆ ಕಂಡು ಬಂದಿತ್ತು.
ಗರ್ಭಕೋಶದ ಗಡ್ಡೆಯನ್ನು ಸ್ತ್ರೀ ರೋಗ ತಜ್ಞೆ ಡಾ.ಅಂಕಿತ.ಜಿ.ಭಟ್ ಇವರು ಚಿಕಿತ್ಸೆಯಲ್ಲಿ ಸತತ ಪ್ರಯತ್ನದ ಮೂಲಕ ಯಶಸ್ವಿಯಾಗಿ ಕೀ ರಂದ್ರ ಚಿಕಿತ್ಸೆ (Lap hysterectomy ) ನೆರವೇರಿಸಿ ಸುಮಾರು ೧.೬kg ಗಾತ್ರದ ಮಾಂಸ ಗಡ್ಡೆಯನ್ನು ಹೊರತೆಗೆದಿದ್ದಾರೆ.ಇದೀಗ ರೋಗಿ ಶಸ್ತ್ರಚಿಕಿತ್ಸೆಯ ೪ ಗಂಟೆಗಳ ನಂತರ ನಡೆದಾಡಲು ಶಕ್ತರಾಗಿದ್ದಾರೆ.
ತನ್ನ ಕಿರಿ ವಯಸ್ಸಿನಲ್ಲಿ ಇಂತಹ ಅಪರೂಪದ ಶಸ್ತ್ರಚಿಕಿತ್ಸೆ ಯನ್ನು ನೆರವೇರಿಸಿದ ಇವರ ಸಾಧನೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.ಕಳೆದ ಎರಡು ದಶಕಗಳಿಂದ ಉಜಿರೆಯಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ನೀಡುತ್ತಿರುವ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ NABH ಮಾನ್ಯತೆ ಪಡೆದಿದೆ.
ರೋಗಿಗಳಿಗೆ ಅತ್ಯುತ್ತಮ ಸೇವೆ ಸೇರಿದಂತೆ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದ ಆಸ್ಪತ್ರೆಯಲ್ಲಿ ಅತ್ಯಂತ ಅಪರೂಪದ ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿರುವುದು ಮತ್ತೊಂದು ಗರಿಮೆಗೆ ಒಳಗಾಗಿದೆ.

Related posts

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!