24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

ಬೆಳ್ತಂಗಡಿ: ಫೆ. 28 ರಂದು ಪಿಲಿಗೂಡು ಉನ್ನತಿಕರಿಸಿದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿಯ ಕುರಿತು ಬೆಳಕು ಎನ್ನುವ ಹೆಸರಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿ ಬಹುಮುಖ ಪ್ರತಿಭೆಯ ಚಂದ್ರಹಾಸ್ ಬಳಂಜ ನಡೆಸಿಕೊಟ್ಟರು.

ಬಹುಮುಖ ಪ್ರತಿಭೆಯುಳ್ಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿ ಸಂಯೋಜಕಿ ಜೆಸಿ ಮಮಿತಾ ಸುಧೀರ್ ವಹಿಸಿಕೊಂಡರು.

ಮುಖ್ಯ ಅತಿಥಿಯಾಗಿ ಪಿಲಿಗೂಡು ಸರ್ಕಾರಿ ಉನ್ನತೀಕರಿಸಿದ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಅನಿತಾ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಶಂಕರ್ ರಾವ್ ಸಭೆಗೆ ಪರಿಚಯಿಸಿದರು.
ಮಹಿಳಾ ವಿಭಾಗದ ನಿರ್ದೇಶಕರಾದ ಶ್ರೀಮತಿ ಸುಭಾಷಿಣಿ ಗೌರವಾನ್ವಿತರನ್ನ ವೇದಿಕೆಗೆ ಆಹ್ವಾನಿಸಿದರು. ಜೆಜೆಸಿ ಸೃಷ್ಟಿ ಜೆಸಿ ವಾಣಿ ವಾಚಿಸಿದರು. ಜಿಸಿಐ ಬೆಳ್ತಂಗಡಿ ಮಂಜುಶ್ರೀ ಕಾರ್ಯದರ್ಶಿ ಜೆಸಿ ಸುಧೀರ್ ಕೆ ಎನ್ ಸರ್ವರಿಗೂ ವಂದಿಸಿದರು.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!