September 6, 2026
ಅಪರಾಧ ಸುದ್ದಿ

ಪುಂಜಾಲಕಟ್ಟೆ: ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬಂಧನ: ಜಾಮೀನ‌ ಮೇಲೆ ಬಿಡುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ ಪೋಲಿಸ್ ಠಾಣೆಯ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿ,
ನಾಲ್ಕು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ನಾಸೀರುದ್ದೀನ್ (25ವ) ಕಳಂಜಿಬೈಲು ಮನೆ ಪುತ್ತಿಲ ಗ್ರಾಮ ಎಂಬಾತನನ್ನು ಹಾಗೂ ಇದೇ ಠಾಣೆಯ ಪ್ರಕರಣವೊಂದರಲ್ಲಿ ಆರೋಪಿಯಾಗಿ 1 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸಿನಾನ (23ವ) ಕಳಂಜಿಬೈಲು ಮನೆ, ಪುತ್ತಿಲ ಎಂಬುವವರನ್ನು ಮಾ.1ರಂದು
ಬೆಳ್ತಂಗಡಿ ತಾಲೂಕು ಪುತ್ತಿಲ ಗ್ರಾಮದ ಕಳಂಜಿಬೈಲು ಎಂಬಲ್ಲಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯ HC ನವೀನ ಜಿ, HC‌ ಸಂದೀಪ್ ಎಸ್ , PC ಶಾಮರಾಯಯವರು ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆ ಎಮ್ ಎಫ್ ಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ
ರೂ. 28,300/- ದಂಡವನ್ನು ವಿಧಿಸಿ ಉಳಿದ ಪ್ರಕರಣದಲ್ಲಿ ಷರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

Related posts

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ದಿಡುಪೆ ಫಾಲ್ಸ್‌ನಲ್ಲಿ ನಿಯಮ ಉಲ್ಲಂಘನೆ; ಹೋಂಸ್ಟೇ ಮಾಲೀಕರಿಗೆ ದಂಡ

Suddi Udaya

ಬೆಳ್ತಂಗಡಿ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿಹಣ ಅವ್ಯವಹಾರ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 14 ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಶವ ಎಸೆದ ಪ್ರಕರಣ: ಫಲ ನೀಡದ ಕಾರ್ಯಚರಣೆ

Suddi Udaya

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕುವೆಟ್ಟು:ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!