September 6, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಪದ್ಮಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಪದ್ಮಂಜದಲ್ಲಿ ನಿರ್ಮಿಸಲಾಗಿರುವ ರೈತ ಸಭಾಭವನ ಹಾಗೂ ರೈತ ಗೋದಾಮ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.2ರಂದು ರೈತ ಸಭಾಭವನ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ. ರೈತ ಗೋದಮು ಕಟ್ಟಡ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕರಾದ ಕೆ ಪ್ರತಾಪ್ ಸಿಂಹ ನಾಯಕ್.ಕ್ಯಾಂಪ್ಕೋ ಬ್ರಾಂಚ್ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕರಾದ ಕೆ ಹರೀಶ್ ಕುಮಾರ್. ನವಿಕೃತ ಪ್ರಧಾನ ಕಛೇರಿ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಧರ್ಮಸ್ಥಳದ ಕಾರ್ಯ ನಿರ್ವಾಹಕ ನಿರ್ದೇಶಕರಾದ ಡಾ. ಎಲ್ ಎಚ್ ಮಂಜುನಾಥ್.ಮೀಟಿಂಗ್ ಹಾಲ್ ಉದ್ಘಾಟನೆಯನ್ನು.ಮಂಗಳೂರು ಡಿ.ಸಿ.ಸಿ ಬ್ಯಾಂಕ್. ನಿರ್ದೇಶಕರಾದ ನಿರಂಜನ್ ಬಾವಂತಬೆಟ್ಟು.ಕೃಷಿ ಯಂತ್ರ ಮೇಳ ಉದ್ಘಾಟನೆಯನ್ನು ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ.ಬಲ್ಯೊಟ್ಟು ಹಾಗೂ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕಾರ ಹೇಳಿದರು

ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ.ಪದ್ಮು೦ಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 1976 ರಲ್ಲಿ ಪ್ರಾರಂಭಗೊಂಡು ಕಣಿಯೂರು, ಬಂದಾರು, ಮೊಗ್ರು ಈ ಮೂರು ಗ್ರಾಮಗಳ ಕಾರ್ಯವ್ಯಾಪ್ತಿಯನ್ನು ಹೊಂದಿದೆ. ನಮ್ಮ ಸಹಕಾರಿ ಸಂಘದ ಮೂಲಕ ಗ್ರಾಮದ ರೈತರ ಕೃಷಿ ಅಭಿವೃದ್ಧಿಗೆ ಪೂರಕವಾಗಿ ಅನೇಕ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಪರವಾಗಿ ಕೆಲಸ ಕಾರ್ಯಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಪ್ರಸ್ತುತ ನಮ್ಮ ಸಂಘವು ಸುಮಾರು 3680 ಸದಸ್ಯರನ್ನು ಒಳಗೊಂಡಿದೆ.

ಸಂಘವು ಪದ್ಮುಂಜ ಪರಿಸರದಲ್ಲಿ ಸುಸಜ್ಜಿತವಾದ ಸ್ವಂತ ಕಟ್ಟಡವನ್ನು ಹೊಂದಿದೆ. ಹಾಗೂ ಬಂದಾರು ಗ್ರಾಮದಲ್ಲಿ ಶಾಖಾ ಕಟ್ಟಡವನ್ನು ಹೊಂದಿರುತ್ತದೆ. ಸಂಘದಲ್ಲಿ ಒಟ್ಟು 18 ಕೋಟಿ ಠೇವಣಿ ಇರುತ್ತದೆ, ಸಂಘದ ಮೂಲಕ ರೈತರಿಗೆ ಕೃಷಿ ಮತ್ತು ಇತರ ಉದ್ದೇಶಕ್ಕಾಗಿ 69 ಕೋಟಿ ಸಾಲವನ್ನು ವಿತರಿಸಲಾಗಿದೆ. ವಾರ್ಷಿಕ 290 ಕೋಟಿ ವಹಿವಾಟು ನಡೆಸಿ ಕಳೆದ ವರ್ಷ 1 ಕೋಟಿ 3 ಲಕ್ಷ ಲಾಭವನ್ನು ಗಳಿಸಿರುತ್ತದೆ. ಸಂಘದ ಮೂಲಕ ಮೂರು ಗ್ರಾಮದ ಜನರಿಗೆ ಪಡಿತರ ವಿತರಣೆ, ರಾಸಾಯನಿಕ ಗೊಬ್ಬರ ಪೂರೈಕೆ, ಕೃಷಿ ಉಪಕರಣ ಇತ್ಯಾದಿಗಳನ್ನು ನಿರಂತರವಾಗಿ ಪೂರೈಸಿಕೊಂಡು ಬಂದಿದೆ ಎಂದು ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಅಶೋಕ್ ಗೌಡ ಪಾಂಜಾಳ, ನಿದೇಶಕರುಗಳಾದ ರಾಮಣ್ಣ ಮಡಿವಾಳ, ಉದಯ ಕುಮಾರ್, ಶೀಲಾವತಿ ಉಪಸ್ಥಿತರಿದ್ದರು.

Related posts

ಆ.18: ದೇಶವ್ಯಾಪಿ ಕಾರ್ಮಿಕ ಪ್ರತಿಭಟನೆ: ಬೆಳ್ತಂಗಡಿ ತಾಲೂಕಿನ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು: ಅನಿಲ್ ಕುಮಾರ್ ಯು

Suddi Udaya

ಎಕ್ಸೆಲ್‌ ಟೆಕ್ನೋ ಸ್ಕೂಲ್‌ಗೆ ಶೇ.100 ಫಲಿತಾಂಶ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಕ್ಷಕಿ ಪವಿತ್ರಾ ದಿನೇಶ್ ಕೊಕ್ಕಡ ರವರಿಗೆ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ ಪ್ರದಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!