ಬೆಳ್ತಂಗಡಿ : ಕರಾವಳಿ ಪ್ರಜಾಧ್ವನಿ ಯಾತ್ರೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಳದಂಗಡಿ ಜಿ.ಪಂ ವ್ಯಾಪ್ತಿಯ ಬೃಹತ್ ಸಾರ್ವಜನಿಕ ಸಭೆ ಮಾ.3ರಂದು ಅಳದಂಗಡಿ ಬಸ್ ನಿಲ್ದಾಣ ಬಳಿ ನಡೆಯಿತು.
ಅಖಿಲ ಭಾರತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್ ಉದ್ಘಾಟಿಸಿ ದರು. ವಿರೋಧ ಪಕ್ಷದ ನಾಯಕ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಕೆ.ವಸಂತ ಬಂಗೇರ, ಮಾಜಿ ಸಚಿವ ಕೆ.ಗಂಗಾಧರ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ರಾಜಶೇಖರ ಅಜ್ರಿ, ಮಾಜಿ ಮೆಯರ್ ಶಶಿಧರ ಹೆಗ್ಡೆ, ಕೆಪಿಸಿಸಿ ಸಂಯೋಜಕ ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಗೌಡ , ಕೆಪಿಸಿಸಿ ಸದಸ್ಯ ಕೇಶವ ಗೌಡ,
ಎಸ್.ಸಿ ಘಟಕದ ಜಿಲ್ಲಾಧ್ಯಕ್ಷ ಶೇಖರ ಕುಕ್ಕೇಡಿ, ವಿವಿಧ ಘಟಕಗಳ ಮುಖಂಡರಾದ ಸಲೀಂ ಗುರುವಾಯನಕೆರೆ, ಸತೀಶ್ ಕುಮಾರ್ ನಮನ, ಪ್ರಶಾಂತ್ ವೇಗಸ್, ವಂದನಾ ಭಂಡಾರಿ,ನಮಿತಾ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.














