25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಕಾಡು ಪ್ರಾಣಿಗಳನ್ನು ಹೆದರಿಸಲು ಕೋವಿಯಿಂದ ಹಾರಿಸಿದ ಗುಂಡು ತಾಗಿ ಗಂಭೀರ ಗಾಯ

ನಿಡ್ಲೆ : ಕಾಡು ಪ್ರಾಣಿಗಳನ್ನು ಹೆದರಿಸಲು ತೋಟದ ಕಡೆ ಗುರಿ ಇಟ್ಟು ಕೋವಿಯನ್ನು ಸಿಡಿಸಿದ ಪರಿಣಾಮ ಆಕಸ್ಮಿಕ ವಾಗಿ ಗುಂಡು ತಾಗಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ನೂಜಿಲ ಎಂಬಲ್ಲಿ ಮಾ.2ರಂದು ನಡೆಯಿತು.

ನಿಡ್ಲೆ ಗ್ರಾಮದ ನೂಜಿಲ ಮನೆ ದಿ. ರಾಮಣ್ಣ ಗೌಡರ ಪುತ್ರ ಡೀಕಯ್ಯ ( 41 ವರ್ಷ) ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇವರ ಸಹೋದರ ಲಕ್ಷ್ಮಣ ಗೌಡ ಕೋವಿಯಿಂದ ಗುಂಡು ಹಾರಿಸಿದವರಾಗಿದ್ದು, ಇವರ ಮೇಲೆ ಧಮ೯ಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ವಿವರ: ಮಾ. 02ರಂದು ರಾತ್ರಿ ಡೀಕಯ್ಯ ಗೌಡ ಅವರು ಅಣ್ಣನಾದ ಲಕ್ಷ್ಮಣ ಗೌಡರವರ ಮನೆಗೆ ಬಂದಿದ್ದರು., ರಾತ್ರಿ 8.30 ಗಂಟೆಯ ವೇಳೆಗೆ ನಾಯಿಗಳು ಎಡಬಿಡದೇ ಬೊಗಳುತ್ತಿರುವುದನ್ನು ಗಮನಿಸಿದ ಲಕ್ಷ್ಮಣ ಗೌಡರವರು ತನ್ನ ಜಮೀನಿಗೆ ಬರುತ್ತಿರುವ ಕಾಡು ಪ್ರಾಣಿಗಳನ್ನು ಹೆದರಿಸಲು ಪರಾವನಣಿಗೆ ಹೊಂದಿರುವ ತೋಟೆ ಕೋವಿಯನ್ನು ತೆಗೆದುಕೊಂಡು ಬಂದು ಅದಕ್ಕೆ ಮದ್ದುಗುಂಡನ್ನು ತುಂಬಿಸಿ,
ಡೀಕಯ್ಯ ಗೌಡರು ಅಂಗಳದಲ್ಲಿ ನಿಂತಿರುವುದನ್ನು ಗಮನಿಸದೇ ಮನೆಯ ಮುಂದುಗಡೆ ಇರುವ ತೋಟದ ಕಡೆ ಗುರಿ ಇಟ್ಟು ಕೋವಿಯನ್ನು ಸಿಡಿಸಿದ್ದರು.
ಈ ವೇಳೆ ಆಕಸ್ಮಿಕ ವಾಗಿ ಸಿಡಿಸಿದ ಚಿಕ್ಕ 2 ಗುಂಡುಗಳು ಡೀಕಯ್ಯರ ಬಲಕೈಗೆ ಮತ್ತು ಎಡಕಾಲಿಗೆ ತಾಗಿ ಗಾಯವಾಗಿದ್ದು, ಅವರನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಧಮ೯ಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿಸಿದ್ದಾರೆ.

Related posts

ಸವಣಾಲಿನಲ್ಲಿ ಬೈಕ್- ಬೈಕ್ ನಡುವೆ ಅಪಘಾತ : ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ ಹೆನ್ರಿ ಡಿ’ ಸೋಜ ಮೃತ್ಯು

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya

ವೃದ್ಧನಿಂದ ಮಕ್ಕಳಿಗೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಕೇಸ್ ದಾಖಲು

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲು: ಶವ ಪತ್ತೆ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

Suddi Udaya
error: Content is protected !!