July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

ಬೆಳ್ತಂಗಡಿ:ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಎಂಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿಯನ್ನು ಉಜಿರೆಯ ಉದ್ಯಮಿ ,ಲಕ್ಷ್ಮೀ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರು ಪೆ.3ರಂದು ಉದ್ಘಾಟಿಸಿ ಚಾಲನೆ ನೀಡಿದರು

. ಮತ್ತು ಅವರು ಉಪಸ್ಥಿತರಿದ್ದ ರಿಕ್ಷಾ ಚಾಲಕರನ್ನು ಉದ್ದೇಶಿಸಿ ತಾನು ರಿಕ್ಷಾ ಚಾಲಕರ ಸಂಕಷ್ಟಕ್ಕೆ ಸದಾ ಸಹಾಯ ಮಾಡುತ್ತೇನೆಂದು ಭರವಸೆ ನೀಡಿದರು
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಿಎಂಎಸ್ ಹಿರಿಯ ನಾಯಕರು ವಿಶ್ವನಾಥ ಶೆಟ್ಟಿ ಅವರು ರಿಕ್ಷಾ ಚಾಲಕರು ತಮ್ಮ ‌ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳುವಂತೆ ಹಾಗೂ ಕ್ಷೇಮ ನಿಧಿಯ ಯೋಜನೆಯನ್ನು ಉತ್ತಮ ಕಾರ್ಯಗತಗೊಳಿಸಲು ಪ್ರಯತ್ನಿಸುವಂತೆ ವಿನಂತಿಸಿದರು.ಕಟ್ಟಡ ಕಾರ್ಮಿಕರ ಮಂಡಳಿಯಂತೆ ರಿಕ್ಷಾ ಚಾಲಕರ ಶ್ರೇಯೋಬಿವ್ರದ್ದಿಗೆ ಮಂಡಳಿಯನ್ನು ರಚಿಸುವಂತೆ ಭಾರತೀಯ ಮಜ್ದೂರ್ ಸಂಘ ಕರ್ನಾಟಕ ಸರಕಾರವನ್ನು ಅನೇಕ ಭಾರಿ ಒತ್ತಾಯಿಸಿದೆ.ಈ ಹೋರಾಟಕ್ಕೆ ಬಲ ಬರಬೇಕಾದರೆ ರಿಕ್ಷಾ ಚಾಲಕರು ಸಂಘಟಿತರಾಗಬೇಕಾಗುವುದು ಅವಶ್ಯಕ ಎಂದು ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಯು. ವಹಿಸಿದ್ದರು

ಬಿಎಂಎಸ್ ರಾಜ್ಯ ಕಾರ್ಯದರ್ಶಿ ಶ್ರೀ ಜಯರಾಜ್ ಸಾಲಿಯಾನ್ ,.ಬಿಎಂಎಸ್ ಬೆಳ್ತಂಗಡಿ ತಾಲೂಕು ಸಮಿತಿ ಅದ್ಯಕ್ಷರಾದ ಉದಯ ಬಿ.ಕೆ.
ಬಿಎಂಎಸ್ ರಿಕ್ಷಾ ಚಾಲಕ ಸಂಘ ಬೆಳ್ತಂಗಡಿ ಗೌರವ ಸಲಹೆಗಾರರು ರಿಕ್ಷಾ ಸಂಘಟನೆಯ ಮುಂಖಡರಾದ ಉಮೇಶ್ ಅತ್ತಾಜೆ ಹಾಗೂ ಅದ್ಯಕ್ಷರಾದ ಕ್ರಷ್ಣ ಬೆಳಾಲು ,ಪ್ರಧಾನ ಕಾರ್ಯದರ್ಶಿ ರಮೇಶ್ ಕುದ್ರಡ್ಕ,ಪ್ರಶಾಂತ ಗರ್ಡಾಡಿ,ಲವಕುಮಾರ್ ಕಾರ್ಯಕ್ರಮವನ್ನು ಬಿಎಂಎಸ್ ತಾಲೂಕು ಸಂಯೋಜಕ ಬಿಎಂಎಸ್ ತಾಲೂಕು ಸಂಯೋಜಕ ಸಾಂತಪ್ಪ ಕಲ್ಮಂಜ ನಿರೂಪಿಸಿ,ರಿಕ್ಷಾ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಕೆ.ಕುದ್ರಡ್ಕ ಸ್ವಾಗತಿಸಿ ಪ್ರಶಾಂತ ಗರ್ಡಾಡಿ ವಂದಿಸಿದರು

Related posts

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya
error: Content is protected !!