25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

ಬೆಳ್ತಂಗಡಿ: ಸ್ಥಾನಿಕ ಬ್ರಾಹ್ಮಣ ಮಹಾಮಂಡಲ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ವಿಶ್ವಮಟ್ಟದ 5ನೇ ಸ್ಥಾನಿಕ ಬ್ರಾಹ್ಮಣ ಸಮಾವೇಶವನ್ನು ಮಾ. 4 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ದೀಪ ಬೆಳಗಿಸಿ, ಉದ್ಘಾಟಿಸಿದರು.


ಹೊರನಾಡು ಆಧಿಶಕ್ಯಾತ್ಮಕ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕರ್ತರಾದ ಭೀಮೇಶ್ವರ ಜೋಷಿ ಶುಭಾ ಶಂಸನೆ ಗೈದರು, ಸಭಾಧ್ಯಕ್ಷತೆಯನ್ನು ಸ್ಥಾನಿಕ ಬ್ರಾಹ್ಮಣ ಮಹಾಂಡಲ ಅಧ್ಯಕ್ಷ ಎಂ. ದೇವಾನಂದ ಭಟ್ ವಹಿಸಿದ್ದರು. ಸಮ್ಮೇಳನ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಅಧ್ಯಕ್ಷ ಪಿ. ರಾಧಾಕೃಷ್ಣ ರಾವ್‌ ಧರ್ಮಸ್ಥಳ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಪಂಜ ಭಾಗವಹಿಸಿದ್ದರು.
ಸಮಾವೇಶದ ಗೌರವ ಅಧ್ಯಕ್ಷ ಎಸ್. ಕೆ. ಜಗನ್ನಿವಾಸ ರಾವ್ ಪುತ್ತೂರು, ಸಂಚಾಲಕ ಪಿ. ಲಕ್ಷ್ಮೀನಾರಾಯಣ ರಾವ್, ಕಾರ್ಯದರ್ಶಿ ಬಿ. ಕೆ. ಧನಂಜಯ ರಾವ್, ಗೌರವ ಸಲಹೆಗಾರ ಅರುಣ್ ಕುಮಾರ್ ಎಂ. ಎಸ್, ದಿನೇಶ್ ಕುಮಾರ್ ಎಂ. ಎಸ್., ರೇಖಾ ಸುಧೀರ್ ರಾವ್, ಕೋಶಾಧಿಕಾರಿ ಮಿಥುನ್ ರಾವ್, ಉಪಾಧ್ಯಕ್ಷರುಗಳಾದ ಸುಬ್ರಹ್ಮಣ್ಯ ರಾವ್, ಪ್ರಶಾಂತ್, ಶಿವಾನಂದ ರಾವ್, ಮಹಿಳಾ ವೇದಿಕೆ ಅಧ್ಯಕ್ಷೆ ಮಮತ ರಾವ್, ಕಾರ್ಯದರ್ಶಿ ನಿಶಾ ವಿಶ್ವನಾಥ್, ಯುವ ವೇದಿಕೆ ಅಧ್ಯಕ್ಷ ಪವನ್ ರಾವ್, ಕಾರ್ಯದರ್ಶಿ ನಿತಿನ್ ರಾವ್, 18 ಮಹಾ ಮಂಡಲದ ಪದಾಧಿಕಾರಿಗಳು ಸದಸ್ಯರು, ವಲಯಗಳ ಪದಾಧಿಕಾರಿಗಳು, ಸದಸ್ಯರು, ಸ್ಥಾನಿಕ ಬಂಧುಗಳು ಹಾಜರಿದ್ದರು. ಸಮಾಜ ಸೇವೆ ಗೈದ ಸವೋ೯ತ್ತಮ ರಾವ್‌ ಚಿಟ್ಟಾಡಿ ʻಸ್ಥಾನಿಕ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ 18 ಸಭಾ ಸಾಧಕರನ್ನು ಸನ್ಮಾನಿಸಲಾಯಿತು.

Related posts

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಕಾಲೇಜಿನ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
error: Content is protected !!