25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಕಾಡು ಪ್ರಾಣಿಗಳನ್ನು ಹೆದರಿಸಲು ಕೋವಿಯಿಂದ ಹಾರಿಸಿದ ಗುಂಡು ತಾಗಿ ಗಂಭೀರ ಗಾಯ

ನಿಡ್ಲೆ : ಕಾಡು ಪ್ರಾಣಿಗಳನ್ನು ಹೆದರಿಸಲು ತೋಟದ ಕಡೆ ಗುರಿ ಇಟ್ಟು ಕೋವಿಯನ್ನು ಸಿಡಿಸಿದ ಪರಿಣಾಮ ಆಕಸ್ಮಿಕ ವಾಗಿ ಗುಂಡು ತಾಗಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ನೂಜಿಲ ಎಂಬಲ್ಲಿ ಮಾ.2ರಂದು ನಡೆಯಿತು.

ನಿಡ್ಲೆ ಗ್ರಾಮದ ನೂಜಿಲ ಮನೆ ದಿ. ರಾಮಣ್ಣ ಗೌಡರ ಪುತ್ರ ಡೀಕಯ್ಯ ( 41 ವರ್ಷ) ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇವರ ಸಹೋದರ ಲಕ್ಷ್ಮಣ ಗೌಡ ಕೋವಿಯಿಂದ ಗುಂಡು ಹಾರಿಸಿದವರಾಗಿದ್ದು, ಇವರ ಮೇಲೆ ಧಮ೯ಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ವಿವರ: ಮಾ. 02ರಂದು ರಾತ್ರಿ ಡೀಕಯ್ಯ ಗೌಡ ಅವರು ಅಣ್ಣನಾದ ಲಕ್ಷ್ಮಣ ಗೌಡರವರ ಮನೆಗೆ ಬಂದಿದ್ದರು., ರಾತ್ರಿ 8.30 ಗಂಟೆಯ ವೇಳೆಗೆ ನಾಯಿಗಳು ಎಡಬಿಡದೇ ಬೊಗಳುತ್ತಿರುವುದನ್ನು ಗಮನಿಸಿದ ಲಕ್ಷ್ಮಣ ಗೌಡರವರು ತನ್ನ ಜಮೀನಿಗೆ ಬರುತ್ತಿರುವ ಕಾಡು ಪ್ರಾಣಿಗಳನ್ನು ಹೆದರಿಸಲು ಪರಾವನಣಿಗೆ ಹೊಂದಿರುವ ತೋಟೆ ಕೋವಿಯನ್ನು ತೆಗೆದುಕೊಂಡು ಬಂದು ಅದಕ್ಕೆ ಮದ್ದುಗುಂಡನ್ನು ತುಂಬಿಸಿ,
ಡೀಕಯ್ಯ ಗೌಡರು ಅಂಗಳದಲ್ಲಿ ನಿಂತಿರುವುದನ್ನು ಗಮನಿಸದೇ ಮನೆಯ ಮುಂದುಗಡೆ ಇರುವ ತೋಟದ ಕಡೆ ಗುರಿ ಇಟ್ಟು ಕೋವಿಯನ್ನು ಸಿಡಿಸಿದ್ದರು.
ಈ ವೇಳೆ ಆಕಸ್ಮಿಕ ವಾಗಿ ಸಿಡಿಸಿದ ಚಿಕ್ಕ 2 ಗುಂಡುಗಳು ಡೀಕಯ್ಯರ ಬಲಕೈಗೆ ಮತ್ತು ಎಡಕಾಲಿಗೆ ತಾಗಿ ಗಾಯವಾಗಿದ್ದು, ಅವರನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಧಮ೯ಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿಸಿದ್ದಾರೆ.

Related posts

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಆರೋಪಿ ಪುದುವೆಟ್ಟುವಿನ ಯುವಕನ ಬಂಧನ

Suddi Udaya

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಮಾನಕಾರಿ‌ ಸಂದೇಶಗಳ ಪೋಸ್ಟ್ : ಬೆಳ್ತಂಗಡಿ ಹಾಗೂ ವೇಣೂರು ಠಾಣೆಯಲ್ಲಿ 6 ಪ್ರಕರಣ ದಾಖಲು

Suddi Udaya
error: Content is protected !!