ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಗೇರುಕಟ್ಟೆ:ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥ ಮರಕ್ಕೆ ಕಟ್ಟೆ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಮಾ.4ರಂದು ನಡೆಯಿತು.ನಾಳ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ. ಮೂ. ರಾಘವೇಂದ್ರ ಅಸ್ರಣ್ಣ ರವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.

ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ ,ಸದಸ್ಯರಾದ ಹಾಗೂ ಕಳಿಯ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ಸಮಿತಿ ಸದಸ್ಯರಾದ ಅಂಬಾ ಬಿ.ಆಳ್ವ ನಾಳ, ದಿನೇಶ್ ಗೌಡ ಕಲಾಯಿತೊಟ್ಟು, ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ರೀತಾ ಚಂದ್ರಶೇಖರ ನಾಳ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಸಂಬೋಳ್ಯ, ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಗೇರುಕಟ್ಟೆ,ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ, ಕಳಿಯ ಗ್ರಾಮದ ಪಂಚಾಯತ್ ಸದಸ್ಯ ಸುಧಾಕರ ಮಜಲು, ಪ್ರಮುಖರಾದ ಸದಸ್ಯರಾದ ಉಮನಾಥ ಶೆಟ್ಟಿ,ಯೋಗೀಶ್ ಸುವರ್ಣ ಅಡ್ಡಕೊಡಂಗೆ, ಸದಾಶಿವ ನ್ಯಾಕ್ ಹೀರ್ಯ, ಜಗನಾಥ ಪೂಜಾರಿ ವಂಜಾರೆ, ವಿವೇಕ್ ಆಳ್ವ, ಸೋಮಪ್ಪ ಗೌಡ, ಶಶಿಧರ ಶೆಟ್ಟಿ, ಜಯಚಂದ್ರ ಆಚಾರ್ಯ, ಉಮೇಶ್ ಗೌಡ,ಲೋಕೇಶ್ ನಾಳ, ಶೋಭಾ ನಾಳ, ಕಟ್ಟಡ ನಿರ್ಮಾಣ ಮೇಸ್ತ್ರಿ ಕೊರಗಪ್ಪ ನಾಳ, ಉಪಸ್ಥಿತರಿದ್ದರು.

Leave a Comment

error: Content is protected !!