September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

ಬೆಳ್ತಂಗಡಿ: ಸ್ಥಾನಿಕ ಬ್ರಾಹ್ಮಣ ಮಹಾಮಂಡಲ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ವಿಶ್ವಮಟ್ಟದ 5ನೇ ಸ್ಥಾನಿಕ ಬ್ರಾಹ್ಮಣ ಸಮಾವೇಶವನ್ನು ಮಾ. 4 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ದೀಪ ಬೆಳಗಿಸಿ, ಉದ್ಘಾಟಿಸಿದರು.


ಹೊರನಾಡು ಆಧಿಶಕ್ಯಾತ್ಮಕ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕರ್ತರಾದ ಭೀಮೇಶ್ವರ ಜೋಷಿ ಶುಭಾ ಶಂಸನೆ ಗೈದರು, ಸಭಾಧ್ಯಕ್ಷತೆಯನ್ನು ಸ್ಥಾನಿಕ ಬ್ರಾಹ್ಮಣ ಮಹಾಂಡಲ ಅಧ್ಯಕ್ಷ ಎಂ. ದೇವಾನಂದ ಭಟ್ ವಹಿಸಿದ್ದರು. ಸಮ್ಮೇಳನ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಅಧ್ಯಕ್ಷ ಪಿ. ರಾಧಾಕೃಷ್ಣ ರಾವ್‌ ಧರ್ಮಸ್ಥಳ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಪಂಜ ಭಾಗವಹಿಸಿದ್ದರು.
ಸಮಾವೇಶದ ಗೌರವ ಅಧ್ಯಕ್ಷ ಎಸ್. ಕೆ. ಜಗನ್ನಿವಾಸ ರಾವ್ ಪುತ್ತೂರು, ಸಂಚಾಲಕ ಪಿ. ಲಕ್ಷ್ಮೀನಾರಾಯಣ ರಾವ್, ಕಾರ್ಯದರ್ಶಿ ಬಿ. ಕೆ. ಧನಂಜಯ ರಾವ್, ಗೌರವ ಸಲಹೆಗಾರ ಅರುಣ್ ಕುಮಾರ್ ಎಂ. ಎಸ್, ದಿನೇಶ್ ಕುಮಾರ್ ಎಂ. ಎಸ್., ರೇಖಾ ಸುಧೀರ್ ರಾವ್, ಕೋಶಾಧಿಕಾರಿ ಮಿಥುನ್ ರಾವ್, ಉಪಾಧ್ಯಕ್ಷರುಗಳಾದ ಸುಬ್ರಹ್ಮಣ್ಯ ರಾವ್, ಪ್ರಶಾಂತ್, ಶಿವಾನಂದ ರಾವ್, ಮಹಿಳಾ ವೇದಿಕೆ ಅಧ್ಯಕ್ಷೆ ಮಮತ ರಾವ್, ಕಾರ್ಯದರ್ಶಿ ನಿಶಾ ವಿಶ್ವನಾಥ್, ಯುವ ವೇದಿಕೆ ಅಧ್ಯಕ್ಷ ಪವನ್ ರಾವ್, ಕಾರ್ಯದರ್ಶಿ ನಿತಿನ್ ರಾವ್, 18 ಮಹಾ ಮಂಡಲದ ಪದಾಧಿಕಾರಿಗಳು ಸದಸ್ಯರು, ವಲಯಗಳ ಪದಾಧಿಕಾರಿಗಳು, ಸದಸ್ಯರು, ಸ್ಥಾನಿಕ ಬಂಧುಗಳು ಹಾಜರಿದ್ದರು. ಸಮಾಜ ಸೇವೆ ಗೈದ ಸವೋ೯ತ್ತಮ ರಾವ್‌ ಚಿಟ್ಟಾಡಿ ʻಸ್ಥಾನಿಕ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ 18 ಸಭಾ ಸಾಧಕರನ್ನು ಸನ್ಮಾನಿಸಲಾಯಿತು.

Related posts

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya
error: Content is protected !!