September 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

ಬೆಳ್ತಂಗಡಿ: ಸ್ಥಾನಿಕ ಬ್ರಾಹ್ಮಣ ಮಹಾಮಂಡಲ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ವಿಶ್ವಮಟ್ಟದ 5ನೇ ಸ್ಥಾನಿಕ ಬ್ರಾಹ್ಮಣ ಸಮಾವೇಶವನ್ನು ಮಾ. 4 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ದೀಪ ಬೆಳಗಿಸಿ, ಉದ್ಘಾಟಿಸಿದರು.


ಹೊರನಾಡು ಆಧಿಶಕ್ಯಾತ್ಮಕ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕರ್ತರಾದ ಭೀಮೇಶ್ವರ ಜೋಷಿ ಶುಭಾ ಶಂಸನೆ ಗೈದರು, ಸಭಾಧ್ಯಕ್ಷತೆಯನ್ನು ಸ್ಥಾನಿಕ ಬ್ರಾಹ್ಮಣ ಮಹಾಂಡಲ ಅಧ್ಯಕ್ಷ ಎಂ. ದೇವಾನಂದ ಭಟ್ ವಹಿಸಿದ್ದರು. ಸಮ್ಮೇಳನ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಅಧ್ಯಕ್ಷ ಪಿ. ರಾಧಾಕೃಷ್ಣ ರಾವ್‌ ಧರ್ಮಸ್ಥಳ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಪಂಜ ಭಾಗವಹಿಸಿದ್ದರು.
ಸಮಾವೇಶದ ಗೌರವ ಅಧ್ಯಕ್ಷ ಎಸ್. ಕೆ. ಜಗನ್ನಿವಾಸ ರಾವ್ ಪುತ್ತೂರು, ಸಂಚಾಲಕ ಪಿ. ಲಕ್ಷ್ಮೀನಾರಾಯಣ ರಾವ್, ಕಾರ್ಯದರ್ಶಿ ಬಿ. ಕೆ. ಧನಂಜಯ ರಾವ್, ಗೌರವ ಸಲಹೆಗಾರ ಅರುಣ್ ಕುಮಾರ್ ಎಂ. ಎಸ್, ದಿನೇಶ್ ಕುಮಾರ್ ಎಂ. ಎಸ್., ರೇಖಾ ಸುಧೀರ್ ರಾವ್, ಕೋಶಾಧಿಕಾರಿ ಮಿಥುನ್ ರಾವ್, ಉಪಾಧ್ಯಕ್ಷರುಗಳಾದ ಸುಬ್ರಹ್ಮಣ್ಯ ರಾವ್, ಪ್ರಶಾಂತ್, ಶಿವಾನಂದ ರಾವ್, ಮಹಿಳಾ ವೇದಿಕೆ ಅಧ್ಯಕ್ಷೆ ಮಮತ ರಾವ್, ಕಾರ್ಯದರ್ಶಿ ನಿಶಾ ವಿಶ್ವನಾಥ್, ಯುವ ವೇದಿಕೆ ಅಧ್ಯಕ್ಷ ಪವನ್ ರಾವ್, ಕಾರ್ಯದರ್ಶಿ ನಿತಿನ್ ರಾವ್, 18 ಮಹಾ ಮಂಡಲದ ಪದಾಧಿಕಾರಿಗಳು ಸದಸ್ಯರು, ವಲಯಗಳ ಪದಾಧಿಕಾರಿಗಳು, ಸದಸ್ಯರು, ಸ್ಥಾನಿಕ ಬಂಧುಗಳು ಹಾಜರಿದ್ದರು. ಸಮಾಜ ಸೇವೆ ಗೈದ ಸವೋ೯ತ್ತಮ ರಾವ್‌ ಚಿಟ್ಟಾಡಿ ʻಸ್ಥಾನಿಕ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ 18 ಸಭಾ ಸಾಧಕರನ್ನು ಸನ್ಮಾನಿಸಲಾಯಿತು.

Related posts

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya
error: Content is protected !!