September 6, 2026
ಅಪರಾಧ ಸುದ್ದಿ

ಕಾಡು ಪ್ರಾಣಿಗಳನ್ನು ಹೆದರಿಸಲು ಕೋವಿಯಿಂದ ಹಾರಿಸಿದ ಗುಂಡು ತಾಗಿ ಗಂಭೀರ ಗಾಯ

ನಿಡ್ಲೆ : ಕಾಡು ಪ್ರಾಣಿಗಳನ್ನು ಹೆದರಿಸಲು ತೋಟದ ಕಡೆ ಗುರಿ ಇಟ್ಟು ಕೋವಿಯನ್ನು ಸಿಡಿಸಿದ ಪರಿಣಾಮ ಆಕಸ್ಮಿಕ ವಾಗಿ ಗುಂಡು ತಾಗಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ನೂಜಿಲ ಎಂಬಲ್ಲಿ ಮಾ.2ರಂದು ನಡೆಯಿತು.

ನಿಡ್ಲೆ ಗ್ರಾಮದ ನೂಜಿಲ ಮನೆ ದಿ. ರಾಮಣ್ಣ ಗೌಡರ ಪುತ್ರ ಡೀಕಯ್ಯ ( 41 ವರ್ಷ) ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇವರ ಸಹೋದರ ಲಕ್ಷ್ಮಣ ಗೌಡ ಕೋವಿಯಿಂದ ಗುಂಡು ಹಾರಿಸಿದವರಾಗಿದ್ದು, ಇವರ ಮೇಲೆ ಧಮ೯ಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ವಿವರ: ಮಾ. 02ರಂದು ರಾತ್ರಿ ಡೀಕಯ್ಯ ಗೌಡ ಅವರು ಅಣ್ಣನಾದ ಲಕ್ಷ್ಮಣ ಗೌಡರವರ ಮನೆಗೆ ಬಂದಿದ್ದರು., ರಾತ್ರಿ 8.30 ಗಂಟೆಯ ವೇಳೆಗೆ ನಾಯಿಗಳು ಎಡಬಿಡದೇ ಬೊಗಳುತ್ತಿರುವುದನ್ನು ಗಮನಿಸಿದ ಲಕ್ಷ್ಮಣ ಗೌಡರವರು ತನ್ನ ಜಮೀನಿಗೆ ಬರುತ್ತಿರುವ ಕಾಡು ಪ್ರಾಣಿಗಳನ್ನು ಹೆದರಿಸಲು ಪರಾವನಣಿಗೆ ಹೊಂದಿರುವ ತೋಟೆ ಕೋವಿಯನ್ನು ತೆಗೆದುಕೊಂಡು ಬಂದು ಅದಕ್ಕೆ ಮದ್ದುಗುಂಡನ್ನು ತುಂಬಿಸಿ,
ಡೀಕಯ್ಯ ಗೌಡರು ಅಂಗಳದಲ್ಲಿ ನಿಂತಿರುವುದನ್ನು ಗಮನಿಸದೇ ಮನೆಯ ಮುಂದುಗಡೆ ಇರುವ ತೋಟದ ಕಡೆ ಗುರಿ ಇಟ್ಟು ಕೋವಿಯನ್ನು ಸಿಡಿಸಿದ್ದರು.
ಈ ವೇಳೆ ಆಕಸ್ಮಿಕ ವಾಗಿ ಸಿಡಿಸಿದ ಚಿಕ್ಕ 2 ಗುಂಡುಗಳು ಡೀಕಯ್ಯರ ಬಲಕೈಗೆ ಮತ್ತು ಎಡಕಾಲಿಗೆ ತಾಗಿ ಗಾಯವಾಗಿದ್ದು, ಅವರನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಧಮ೯ಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿಸಿದ್ದಾರೆ.

Related posts

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

Suddi Udaya

ಬಂದಾರು: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya
error: Content is protected !!