July 23, 2026
ಅಪರಾಧ ಸುದ್ದಿ

ಕಾಡು ಪ್ರಾಣಿಗಳನ್ನು ಹೆದರಿಸಲು ಕೋವಿಯಿಂದ ಹಾರಿಸಿದ ಗುಂಡು ತಾಗಿ ಗಂಭೀರ ಗಾಯ

ನಿಡ್ಲೆ : ಕಾಡು ಪ್ರಾಣಿಗಳನ್ನು ಹೆದರಿಸಲು ತೋಟದ ಕಡೆ ಗುರಿ ಇಟ್ಟು ಕೋವಿಯನ್ನು ಸಿಡಿಸಿದ ಪರಿಣಾಮ ಆಕಸ್ಮಿಕ ವಾಗಿ ಗುಂಡು ತಾಗಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ನೂಜಿಲ ಎಂಬಲ್ಲಿ ಮಾ.2ರಂದು ನಡೆಯಿತು.

ನಿಡ್ಲೆ ಗ್ರಾಮದ ನೂಜಿಲ ಮನೆ ದಿ. ರಾಮಣ್ಣ ಗೌಡರ ಪುತ್ರ ಡೀಕಯ್ಯ ( 41 ವರ್ಷ) ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇವರ ಸಹೋದರ ಲಕ್ಷ್ಮಣ ಗೌಡ ಕೋವಿಯಿಂದ ಗುಂಡು ಹಾರಿಸಿದವರಾಗಿದ್ದು, ಇವರ ಮೇಲೆ ಧಮ೯ಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ವಿವರ: ಮಾ. 02ರಂದು ರಾತ್ರಿ ಡೀಕಯ್ಯ ಗೌಡ ಅವರು ಅಣ್ಣನಾದ ಲಕ್ಷ್ಮಣ ಗೌಡರವರ ಮನೆಗೆ ಬಂದಿದ್ದರು., ರಾತ್ರಿ 8.30 ಗಂಟೆಯ ವೇಳೆಗೆ ನಾಯಿಗಳು ಎಡಬಿಡದೇ ಬೊಗಳುತ್ತಿರುವುದನ್ನು ಗಮನಿಸಿದ ಲಕ್ಷ್ಮಣ ಗೌಡರವರು ತನ್ನ ಜಮೀನಿಗೆ ಬರುತ್ತಿರುವ ಕಾಡು ಪ್ರಾಣಿಗಳನ್ನು ಹೆದರಿಸಲು ಪರಾವನಣಿಗೆ ಹೊಂದಿರುವ ತೋಟೆ ಕೋವಿಯನ್ನು ತೆಗೆದುಕೊಂಡು ಬಂದು ಅದಕ್ಕೆ ಮದ್ದುಗುಂಡನ್ನು ತುಂಬಿಸಿ,
ಡೀಕಯ್ಯ ಗೌಡರು ಅಂಗಳದಲ್ಲಿ ನಿಂತಿರುವುದನ್ನು ಗಮನಿಸದೇ ಮನೆಯ ಮುಂದುಗಡೆ ಇರುವ ತೋಟದ ಕಡೆ ಗುರಿ ಇಟ್ಟು ಕೋವಿಯನ್ನು ಸಿಡಿಸಿದ್ದರು.
ಈ ವೇಳೆ ಆಕಸ್ಮಿಕ ವಾಗಿ ಸಿಡಿಸಿದ ಚಿಕ್ಕ 2 ಗುಂಡುಗಳು ಡೀಕಯ್ಯರ ಬಲಕೈಗೆ ಮತ್ತು ಎಡಕಾಲಿಗೆ ತಾಗಿ ಗಾಯವಾಗಿದ್ದು, ಅವರನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಧಮ೯ಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿಸಿದ್ದಾರೆ.

Related posts

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

Suddi Udaya

ಎಂಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya
error: Content is protected !!