September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದವಾದ ಆಲೇಖಾನ್ ಹೊರಟ್ಟಿ ಗುಡ್ಡದಲ್ಲಿ
ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ
ಅರಣ್ಯ ನಾಶವಾಗಿದೆ.


ಚಾರ್ಮಾಡಿ ಘಾಟಿಗೆ ಹೊಂದಿಕೊಂಡಂತಿರುವ
ಎತ್ತರ ಪ್ರದೇಶದ ಗುಡ್ಡದಲ್ಲಿ ಧಗ-ಧಗ ಹೊತ್ತಿ ಉರಿಯುತ್ತಿರುವ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅರಣ್ಯ ಸುಟ್ಟು ಕರಕಲಾಗುತ್ತಿದೆ. ಬೆಂಕಿಯ ಕೆನ್ನಾಲಿಗೆಗೆ ಅರಣ್ಯವಲ್ಲದೆ ಪ್ರಾಣಿ-ಪಕ್ಷಿಗಳ ಸಾವು‌ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ದೌಡಾಯಿಸಿ ದ್ದು, , ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಬೆಂಕಿ ನಂದಿಸಲು ಅಧಿಕಾರಿಗಳಿಗೆ ಸ್ಥಳಿಯರ ಸಾಥ್ ನೀಡಿದ್ದಾರೆ.
ಬೆಂಕಿ ಕಾಣಿಸಿಕೊಂಡಿದ್ದು, ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಇದರಿಂದಾಗಿ ಬೆಂಕಿ ಹೆಚ್ಚು ಪ್ರದೇಶದಲ್ಲಿ ವ್ಯಾಪಿಸುವ ಸಾಧ್ಯತೆ ಇದೆ. ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.

Related posts

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya
error: Content is protected !!