37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

ಬೆಳ್ತಂಗಡಿ : ಅಕ್ರಮ ಸಕ್ರಮದ ಅರ್ಜಿ ವಿಲೇವಾರಿ ಮಾಡಲು 45 ಸಾವಿರ ರೂ. ಲಂಚ ಪಡೆದಿದ್ದ ಗ್ರಾಮ ಕರಣಿಕನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ 4 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 70ಸಾವಿರ ರೂ. ದಂಡ ವಿಧಿಸಿದೆ.

ಈ ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ಸೇವೆ ಸಲ್ಲಿಸಿದ್ದ, ನಂತರ ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಕರಣಿಕರಾಗಿ ವಗಾ೯ವಣೆಗೊಂಡಿದ್ದ ಮಹೇಶ್ ಶಿಕ್ಷೆಗೆ ಒಳಗಾದ ಆರೋಪಿಸಿಯಾಗಿದ್ದಾರೆ.‌
‌‌ಎಸ್.ಮಹೇಶ್ ಅಕ್ರಮ ಸಕ್ರಮದ ಅರ್ಜಿಯ ವಿಲೇವಾರಿಗೆ, ಮಂಡೆಕೋಲು ನಿವಾಸಿ ಗೋಪಾಲಕೃಷ್ಣ ಅವರಿಂದ 60 ಸಾವಿರ ರೂ. ಲಂಚದ ಹಣಕ್ಕೆ ಬೇಡಿಕೆಯಿಟ್ಟಿದ್ದರು. 2016ರ ಜೂ.7 ರಂದು 45,000 ರೂ. ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಮಹೇಶ್ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದರು. ಈ ಸಂಬಂಧ ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ವಿಚಾರಣೆ ನಡೆಸಿ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಜೈಲು ಶಿಕ್ಷೆ ವಿಧಿಸಿ ಮಾ.2 ರಂದು ತೀರ್ಪು ನೀಡಿದ್ದಾರೆ. ಅಪರಾಧಿ ದಂಡ ಕಟ್ಟಲು ವಿಫಲನಾದರೆ ಮತ್ತೆ 8 ತಿಂಗಳ ಕಾಲ ಸಾದಾ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪುನಲ್ಲಿ‌ ತಿಳಿಸಲಾಗಿದೆ.
ಪೊಲೀಸ್ ನಿರೀಕ್ಷ ದಿನಕರ ಶೆಟ್ಟಿ ತನಿಖೆ ನಡೆಸಿದ್ದರು. ಪೊಲೀಸ್ ನಿರೀಕ್ಷಕ ಯೋಗೀಶ್ ಕುಮಾರ್ ತನಿಖೆಯನ್ನು ಮುಂದುವರಿಸಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya
error: Content is protected !!