September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

ಬೆಳ್ತಂಗಡಿ : ಅಕ್ರಮ ಸಕ್ರಮದ ಅರ್ಜಿ ವಿಲೇವಾರಿ ಮಾಡಲು 45 ಸಾವಿರ ರೂ. ಲಂಚ ಪಡೆದಿದ್ದ ಗ್ರಾಮ ಕರಣಿಕನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ 4 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 70ಸಾವಿರ ರೂ. ದಂಡ ವಿಧಿಸಿದೆ.

ಈ ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ಸೇವೆ ಸಲ್ಲಿಸಿದ್ದ, ನಂತರ ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಕರಣಿಕರಾಗಿ ವಗಾ೯ವಣೆಗೊಂಡಿದ್ದ ಮಹೇಶ್ ಶಿಕ್ಷೆಗೆ ಒಳಗಾದ ಆರೋಪಿಸಿಯಾಗಿದ್ದಾರೆ.‌
‌‌ಎಸ್.ಮಹೇಶ್ ಅಕ್ರಮ ಸಕ್ರಮದ ಅರ್ಜಿಯ ವಿಲೇವಾರಿಗೆ, ಮಂಡೆಕೋಲು ನಿವಾಸಿ ಗೋಪಾಲಕೃಷ್ಣ ಅವರಿಂದ 60 ಸಾವಿರ ರೂ. ಲಂಚದ ಹಣಕ್ಕೆ ಬೇಡಿಕೆಯಿಟ್ಟಿದ್ದರು. 2016ರ ಜೂ.7 ರಂದು 45,000 ರೂ. ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಮಹೇಶ್ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದರು. ಈ ಸಂಬಂಧ ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ವಿಚಾರಣೆ ನಡೆಸಿ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಜೈಲು ಶಿಕ್ಷೆ ವಿಧಿಸಿ ಮಾ.2 ರಂದು ತೀರ್ಪು ನೀಡಿದ್ದಾರೆ. ಅಪರಾಧಿ ದಂಡ ಕಟ್ಟಲು ವಿಫಲನಾದರೆ ಮತ್ತೆ 8 ತಿಂಗಳ ಕಾಲ ಸಾದಾ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪುನಲ್ಲಿ‌ ತಿಳಿಸಲಾಗಿದೆ.
ಪೊಲೀಸ್ ನಿರೀಕ್ಷ ದಿನಕರ ಶೆಟ್ಟಿ ತನಿಖೆ ನಡೆಸಿದ್ದರು. ಪೊಲೀಸ್ ನಿರೀಕ್ಷಕ ಯೋಗೀಶ್ ಕುಮಾರ್ ತನಿಖೆಯನ್ನು ಮುಂದುವರಿಸಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

Related posts

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಆ.31: ಉಜಿರೆಯಲ್ಲಿ ಸಾರಥಿ ಮೋಟಾ‌ರ್ ಲಿಂಕ್ಸ್ & ಹೊಗೆ ತಪಾಸಣಾ ಕೇಂದ್ರ ಶುಭಾರಂಭ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!