September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

ಬೆಳ್ತಂಗಡಿ : ಅಕ್ರಮ ಸಕ್ರಮದ ಅರ್ಜಿ ವಿಲೇವಾರಿ ಮಾಡಲು 45 ಸಾವಿರ ರೂ. ಲಂಚ ಪಡೆದಿದ್ದ ಗ್ರಾಮ ಕರಣಿಕನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ 4 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 70ಸಾವಿರ ರೂ. ದಂಡ ವಿಧಿಸಿದೆ.

ಈ ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ಸೇವೆ ಸಲ್ಲಿಸಿದ್ದ, ನಂತರ ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಕರಣಿಕರಾಗಿ ವಗಾ೯ವಣೆಗೊಂಡಿದ್ದ ಮಹೇಶ್ ಶಿಕ್ಷೆಗೆ ಒಳಗಾದ ಆರೋಪಿಸಿಯಾಗಿದ್ದಾರೆ.‌
‌‌ಎಸ್.ಮಹೇಶ್ ಅಕ್ರಮ ಸಕ್ರಮದ ಅರ್ಜಿಯ ವಿಲೇವಾರಿಗೆ, ಮಂಡೆಕೋಲು ನಿವಾಸಿ ಗೋಪಾಲಕೃಷ್ಣ ಅವರಿಂದ 60 ಸಾವಿರ ರೂ. ಲಂಚದ ಹಣಕ್ಕೆ ಬೇಡಿಕೆಯಿಟ್ಟಿದ್ದರು. 2016ರ ಜೂ.7 ರಂದು 45,000 ರೂ. ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಮಹೇಶ್ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದರು. ಈ ಸಂಬಂಧ ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ವಿಚಾರಣೆ ನಡೆಸಿ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಜೈಲು ಶಿಕ್ಷೆ ವಿಧಿಸಿ ಮಾ.2 ರಂದು ತೀರ್ಪು ನೀಡಿದ್ದಾರೆ. ಅಪರಾಧಿ ದಂಡ ಕಟ್ಟಲು ವಿಫಲನಾದರೆ ಮತ್ತೆ 8 ತಿಂಗಳ ಕಾಲ ಸಾದಾ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪುನಲ್ಲಿ‌ ತಿಳಿಸಲಾಗಿದೆ.
ಪೊಲೀಸ್ ನಿರೀಕ್ಷ ದಿನಕರ ಶೆಟ್ಟಿ ತನಿಖೆ ನಡೆಸಿದ್ದರು. ಪೊಲೀಸ್ ನಿರೀಕ್ಷಕ ಯೋಗೀಶ್ ಕುಮಾರ್ ತನಿಖೆಯನ್ನು ಮುಂದುವರಿಸಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

Related posts

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

Suddi Udaya
error: Content is protected !!