22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದವಾದ ಆಲೇಖಾನ್ ಹೊರಟ್ಟಿ ಗುಡ್ಡದಲ್ಲಿ
ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ
ಅರಣ್ಯ ನಾಶವಾಗಿದೆ.


ಚಾರ್ಮಾಡಿ ಘಾಟಿಗೆ ಹೊಂದಿಕೊಂಡಂತಿರುವ
ಎತ್ತರ ಪ್ರದೇಶದ ಗುಡ್ಡದಲ್ಲಿ ಧಗ-ಧಗ ಹೊತ್ತಿ ಉರಿಯುತ್ತಿರುವ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅರಣ್ಯ ಸುಟ್ಟು ಕರಕಲಾಗುತ್ತಿದೆ. ಬೆಂಕಿಯ ಕೆನ್ನಾಲಿಗೆಗೆ ಅರಣ್ಯವಲ್ಲದೆ ಪ್ರಾಣಿ-ಪಕ್ಷಿಗಳ ಸಾವು‌ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ದೌಡಾಯಿಸಿ ದ್ದು, , ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಬೆಂಕಿ ನಂದಿಸಲು ಅಧಿಕಾರಿಗಳಿಗೆ ಸ್ಥಳಿಯರ ಸಾಥ್ ನೀಡಿದ್ದಾರೆ.
ಬೆಂಕಿ ಕಾಣಿಸಿಕೊಂಡಿದ್ದು, ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಇದರಿಂದಾಗಿ ಬೆಂಕಿ ಹೆಚ್ಚು ಪ್ರದೇಶದಲ್ಲಿ ವ್ಯಾಪಿಸುವ ಸಾಧ್ಯತೆ ಇದೆ. ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.

Related posts

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya
error: Content is protected !!