25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

ಮಂಜೊಟ್ಟಿ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ, ರಝ ಗಾರ್ಡನ್ ಮಂಜೊಟ್ಟಿ ಇದರ 2022-23 ನೇ ಸಾಲಿನ ಶಾಲಾ ಟ್ರಸ್ಟ್ ಮತ್ತು ಪೋಷಕರ ವಾರ್ಷಿಕ ಮಹಾಸಭೆಯು ದಿನಾಂಕ 6.3.2023 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಭೆಯ ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟ್ ನಿರ್ದೇಶಕರಾದ ಶ್ರೀಯುತ ಶೇಖ್ ಅಹಮದ್, ಕಾರ್ಯದರ್ಶಿಯಾದ ಶ್ರೀಯುತ ಸೈಯದ್ ಆಯುಬ್ ಕೋಶಾಧಿಕಾರಿಯಾಗಿ ಶ್ರೀಯುತ ಸೈಯದ್ ಇರ್ಫಾನ್ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್, ಹಾಗೂ ಶಾಲಾ ಅರೇಬಿಕ್ ಶಿಕ್ಷಣದ ಮುಖ್ಯ ಗುರುಗಳಾದ ಶ್ರೀಯುತ ಅಬ್ದುಲ್ ರಜಾಕ್ ಇಮ್ದಾದಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಲ್ಲಿನ ಶಿಸ್ತು ಮತ್ತು ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರು ಶಿಕ್ಷಕರೊಂದಿಗೆ ಕೈಜೋಡಿಸಬೇಕು. ವಿದ್ಯಾ ಸಂಸ್ಥೆಯ ಪ್ರಗತಿಗೆ ನಾವೆಲ್ಲರೂ ಒಟ್ಟಾಗಿ ದುಡಿಯಬೇಕು ಎಂದರು. ಹಾಗೂ 2022 23ನೇ ಸಾಲಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಬಗ್ಗೆ ವಿಶೇಷ ಸಮಾಲೋಚನೆ ನಡೆಸಿದರು. ಆಡಳಿತ ಟ್ರಸ್ಟಿನ ನಿರ್ದೇಶಕರಾದ ಶ್ರೀಯುತ ಶೇಕ್ ಅಹಮದ್ ಮಾತನಾಡಿ ” ಪೋಷಕರು ತಮ್ಮ ಮಕ್ಕಳ ಜೊತೆ ಬೆರೆತು ಕಳೆಯುವ ಅಲ್ಪ ಸಮಯವೇ ಮಗುವಿನ ಉತ್ತಮ ಭವಿಷ್ಯವನ್ನು ರೂಪಿಸುತ್ತದೆ ” ಎಂದರು. ಆಡಳಿತ ಟ್ರಸ್ಟ್ ನ ಕಾರ್ಯದರ್ಶಿ ಶ್ರೀಯುತ ಸಯ್ಯದ್ ಅಯುಬ್ ವಿದ್ಯಾ ಸಂಸ್ಥೆಯ ಅಭಿವೃದ್ಧಿಗೆ ಹಾಗೂ ಸರ್ವತೋಮುಖ ಏಳಿಗೆಗೆ ಪೋಷಕರು ತಮ್ಮನ್ನು ತೊಡಗಿಸಿಕೊಳ್ಳುವಂತೆ ವಿನಂತಿಸಿಕೊಂಡರು. ಪೋಷಕರು ತಮ್ಮ ಸಲಹೆ ಮತ್ತು ಅಭಿಪ್ರಾಯಗಳನ್ನು ಹಂಚಿಕೊಳ್ಳುವುದರ ಮೂಲಕ ಸಭೆಗೆ ವಿಶೇಷ ಮೆರುಗನ್ನು ನೀಡಿದರು. ಮುಖ್ಯೋಪಾಧ್ಯಾಯಿನಿ ಯವರ ಧನ್ಯವಾದ ಮಾತುಗಳೊಂದಿಗೆ ಸಭೆಯು ಮುಕ್ತಾಯವಾಯಿತು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

Suddi Udaya

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya
error: Content is protected !!