September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

ಮಂಜೊಟ್ಟಿ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ, ರಝ ಗಾರ್ಡನ್ ಮಂಜೊಟ್ಟಿ ಇದರ 2022-23 ನೇ ಸಾಲಿನ ಶಾಲಾ ಟ್ರಸ್ಟ್ ಮತ್ತು ಪೋಷಕರ ವಾರ್ಷಿಕ ಮಹಾಸಭೆಯು ದಿನಾಂಕ 6.3.2023 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಭೆಯ ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟ್ ನಿರ್ದೇಶಕರಾದ ಶ್ರೀಯುತ ಶೇಖ್ ಅಹಮದ್, ಕಾರ್ಯದರ್ಶಿಯಾದ ಶ್ರೀಯುತ ಸೈಯದ್ ಆಯುಬ್ ಕೋಶಾಧಿಕಾರಿಯಾಗಿ ಶ್ರೀಯುತ ಸೈಯದ್ ಇರ್ಫಾನ್ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್, ಹಾಗೂ ಶಾಲಾ ಅರೇಬಿಕ್ ಶಿಕ್ಷಣದ ಮುಖ್ಯ ಗುರುಗಳಾದ ಶ್ರೀಯುತ ಅಬ್ದುಲ್ ರಜಾಕ್ ಇಮ್ದಾದಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಲ್ಲಿನ ಶಿಸ್ತು ಮತ್ತು ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರು ಶಿಕ್ಷಕರೊಂದಿಗೆ ಕೈಜೋಡಿಸಬೇಕು. ವಿದ್ಯಾ ಸಂಸ್ಥೆಯ ಪ್ರಗತಿಗೆ ನಾವೆಲ್ಲರೂ ಒಟ್ಟಾಗಿ ದುಡಿಯಬೇಕು ಎಂದರು. ಹಾಗೂ 2022 23ನೇ ಸಾಲಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಬಗ್ಗೆ ವಿಶೇಷ ಸಮಾಲೋಚನೆ ನಡೆಸಿದರು. ಆಡಳಿತ ಟ್ರಸ್ಟಿನ ನಿರ್ದೇಶಕರಾದ ಶ್ರೀಯುತ ಶೇಕ್ ಅಹಮದ್ ಮಾತನಾಡಿ ” ಪೋಷಕರು ತಮ್ಮ ಮಕ್ಕಳ ಜೊತೆ ಬೆರೆತು ಕಳೆಯುವ ಅಲ್ಪ ಸಮಯವೇ ಮಗುವಿನ ಉತ್ತಮ ಭವಿಷ್ಯವನ್ನು ರೂಪಿಸುತ್ತದೆ ” ಎಂದರು. ಆಡಳಿತ ಟ್ರಸ್ಟ್ ನ ಕಾರ್ಯದರ್ಶಿ ಶ್ರೀಯುತ ಸಯ್ಯದ್ ಅಯುಬ್ ವಿದ್ಯಾ ಸಂಸ್ಥೆಯ ಅಭಿವೃದ್ಧಿಗೆ ಹಾಗೂ ಸರ್ವತೋಮುಖ ಏಳಿಗೆಗೆ ಪೋಷಕರು ತಮ್ಮನ್ನು ತೊಡಗಿಸಿಕೊಳ್ಳುವಂತೆ ವಿನಂತಿಸಿಕೊಂಡರು. ಪೋಷಕರು ತಮ್ಮ ಸಲಹೆ ಮತ್ತು ಅಭಿಪ್ರಾಯಗಳನ್ನು ಹಂಚಿಕೊಳ್ಳುವುದರ ಮೂಲಕ ಸಭೆಗೆ ವಿಶೇಷ ಮೆರುಗನ್ನು ನೀಡಿದರು. ಮುಖ್ಯೋಪಾಧ್ಯಾಯಿನಿ ಯವರ ಧನ್ಯವಾದ ಮಾತುಗಳೊಂದಿಗೆ ಸಭೆಯು ಮುಕ್ತಾಯವಾಯಿತು.

Related posts

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya

ಆರ್‌ಸಿಬಿ ಸಂಭ್ರಮಾಚರಣೆ: ಇಳಂತಿಲ ಮೂಲದ ಯುವತಿ ಮೃತ್ಯು

Suddi Udaya

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

Suddi Udaya

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!