September 6, 2026
ಅಪರಾಧ ಸುದ್ದಿ

ಕಲ್ಮಂಜ ನಿಡಿಗಲ್‌ನಲ್ಲಿ ಭೀಕರ ವಾಹನ ಅಪಘಾತ ಬೈಕ್‌ ಮತ್ತು ಸ್ಕಾಪಿ೯ಯೋ ನಡುವೆ ಅಪಘಾತ

ಬೆಳ್ತಂಗಡಿ: ಮಂಗಳೂರು- ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಗ್ರಾಮದ ನಿಡಿಗಲ್‌ ಎಂಬಲ್ಲಿ ಬೈಕ್‌ ಹಾಗೂ ಸ್ಕಾಪಿ೯ಯೋ ವಾಹನಗಳ ನಡುವೆ ನಡೆದ ಸಂಭವಿಸಿದ ಭೀಕರ ರಸೆ ಅಪಘಾತದಲ್ಲಿ ಬೈಕ್‌ ಸವಾರ ದಾರುಣವಾಗಿ ಮೃತ ಪಟ್ಟ ಘಟನೆ ಇಂದು ಮಾ.7ರಂದು ಬೆಳಿಗ್ಗೆ ನಡೆದಿದೆ.

ಕಲ್ಮಂಜ ಗ್ರಾಮದ ಎಲೆಂಗಿ ಮನೆ ನಿವಾಸಿ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ್‌ ಕುಮಾರ್‌ (55ವ) ಈ ದುಘ೯ಟನೆಯಲ್ಲಿ ಸಾವನ್ನಪ್ಪಿದ ನತದೃಷ್ಟರಾಗಿದ್ದಾರೆ. ಇವರು ಬೆಳಿಗ್ಗೆ ಮುಂಡಾಜೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಎಂದಿನಂತೆ ಕತ೯ವ್ಯಕ್ಕೆ ಹೋಗುತ್ತಿರುವ ಸಂದಭ೯ದಲ್ಲಿ ಈ ದುರಂತ ಸಂಭವಿಸಿದೆ. ತಮ್ಮ ಬೈಕ್‌ನಲ್ಲಿ ಮುಂಡಾಜೆಗೆ ಹೋಗುತ್ತಿರುವ

ಸಂದಭ೯ದಲ್ಲಿ ಎದುರಿನಿಂದ ಬರುತ್ತಿದ್ದ ಸ್ಕಾಪಿ೯ಯೋ ವಾಹನ ಹಾಗೂ ಬೈಕ್‌ ನಡುವೆ ಅಪಘಾತವಾಗಿ, ಗಂಭೀರ ಗಾಯಗೊಂಡ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತಾದರೂ, ಯಾವುದೇ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಸಾರ್ವಜನಿಕ ರಸ್ತೆಯ ದುರ್ಬಳಕೆ ವಿರುದ್ಧ ಎಸ್.ಡಿ.ಪಿ.ಐ. ದೂರು

Suddi Udaya

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya

ರೆಖ್ಯ: ಆಕಸ್ಮಿಕವಾಗಿ ರಸ್ತೆ ಕಾಂಕ್ರಿಟ್ ಚರಂಡಿಯ ಒಳಗೆ ಬಿದ್ದು ಚಾಲಕ ಮೃತ್ಯು

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya
error: Content is protected !!