22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿ

ಕಲ್ಮಂಜ ನಿಡಿಗಲ್‌ನಲ್ಲಿ ಭೀಕರ ವಾಹನ ಅಪಘಾತ ಬೈಕ್‌ ಮತ್ತು ಸ್ಕಾಪಿ೯ಯೋ ನಡುವೆ ಅಪಘಾತ

ಬೆಳ್ತಂಗಡಿ: ಮಂಗಳೂರು- ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಗ್ರಾಮದ ನಿಡಿಗಲ್‌ ಎಂಬಲ್ಲಿ ಬೈಕ್‌ ಹಾಗೂ ಸ್ಕಾಪಿ೯ಯೋ ವಾಹನಗಳ ನಡುವೆ ನಡೆದ ಸಂಭವಿಸಿದ ಭೀಕರ ರಸೆ ಅಪಘಾತದಲ್ಲಿ ಬೈಕ್‌ ಸವಾರ ದಾರುಣವಾಗಿ ಮೃತ ಪಟ್ಟ ಘಟನೆ ಇಂದು ಮಾ.7ರಂದು ಬೆಳಿಗ್ಗೆ ನಡೆದಿದೆ.

ಕಲ್ಮಂಜ ಗ್ರಾಮದ ಎಲೆಂಗಿ ಮನೆ ನಿವಾಸಿ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ್‌ ಕುಮಾರ್‌ (55ವ) ಈ ದುಘ೯ಟನೆಯಲ್ಲಿ ಸಾವನ್ನಪ್ಪಿದ ನತದೃಷ್ಟರಾಗಿದ್ದಾರೆ. ಇವರು ಬೆಳಿಗ್ಗೆ ಮುಂಡಾಜೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಎಂದಿನಂತೆ ಕತ೯ವ್ಯಕ್ಕೆ ಹೋಗುತ್ತಿರುವ ಸಂದಭ೯ದಲ್ಲಿ ಈ ದುರಂತ ಸಂಭವಿಸಿದೆ. ತಮ್ಮ ಬೈಕ್‌ನಲ್ಲಿ ಮುಂಡಾಜೆಗೆ ಹೋಗುತ್ತಿರುವ

ಸಂದಭ೯ದಲ್ಲಿ ಎದುರಿನಿಂದ ಬರುತ್ತಿದ್ದ ಸ್ಕಾಪಿ೯ಯೋ ವಾಹನ ಹಾಗೂ ಬೈಕ್‌ ನಡುವೆ ಅಪಘಾತವಾಗಿ, ಗಂಭೀರ ಗಾಯಗೊಂಡ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತಾದರೂ, ಯಾವುದೇ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ 4ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು ಇಂದಿನ ಕಾರ್ಯಾಚರಣೆ ಅಂತ್ಯ

Suddi Udaya

ಮದ್ದಡ್ಕದಲ್ಲಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ :ಗಂಭೀರ ಗಾಯ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya
error: Content is protected !!