ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: 2022-23ನೇ ಸಾಲಿನ ಅಂತರ್‌ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತಿ ವರ್ಷ ನೀಡಲಾಗುವ ಉತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಕಣಿಯೂರು ವಿಭಾಗ ವ್ಯಾಪ್ತಿಯ ರಕ್ತಶ್ವರಿ ಪದವು ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ಆವರು ಆಯ್ಕೆಯಾಗಿದ್ದಾರೆ. ನಾಗವೇಣಿ ಅವರು ಕಳೆದ ೨೮ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಉತ್ತಮ ಸೇವೆ ಹಾಗೂ ಅಂಗನವಾಡಿಯಲ್ಲಿ ಹಮ್ಮಿಕೊಂಡ ವಿವಿಧ ಚಟುವಟಿಕೆಗಳು ಹಾಗೂ ಆವರ ಸೇವಾ ಮನೋಭಾವವನ್ನು ಗುರುತಿಸಿ ಇಲಾಖೆ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ನೀಡಿ ಗೌರವಿಸಿದೆ. ಮಾ.೮ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಗವೇಣಿಯವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Leave a Comment

error: Content is protected !!