22.6 C
ಪುತ್ತೂರು, ಬೆಳ್ತಂಗಡಿ
July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

ಧಮ೯ಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.), ಧರ್ಮಸ್ಥಳ ಇದರ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ ಮಾ.8 ರಂದು ಧಮ೯ಸ್ಥಳದ ಮಹೋತ್ಸವ ಸಭಾಭವನದಲ್ಲಿ ಜರುಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಕಾಯ೯ಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
‌ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು.
ಅಮೃತ ಜೀವನ ಪ್ರಯಾಸ್ ಸಿಂಚನ ಪುಸ್ತಕವನ್ನು ಶಿವಸುಬ್ರಹ್ಮಣ್ಯ ರಾಮನ್ ಅಧ್ಯಕ್ಷರು, ಸಿಡ್ಡಿ, ಮುಂಬೈ ಇವರು ಬಿಡುಗಡೆಗೊಳಿಸಿದರು. ಸಿಡ್ಡಿ, ಮುಂಬೈ ಸಂಸ್ಥೆಯ ಮುಖ್ಯ ಮಹಾ ಪ್ರಬಂಧಕರಾದ ರವಿತ್ಯಾಗಿ, ಉಪ ಮಹಾಪ್ರಬಂಧಕರಾದ ನಿತಿನ್ ಶುಕ್ಲಾ, ಯೋಜನೆ ಯ ಹಣಕಾಸು ನಿದೇ೯ಶಕ ಶಾಂತಾರಾಂ ಪೈ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಮುಂಬೈ ಸಂಸ್ಥೆಯಿಂದ ಒಂದು ಸಾವಿರ ಕೋಟಿ ಸಾಲ ಮಂಜೂರು ಪಾತ್ರವನ್ನು ಹಸ್ತಾಂತರಿಸಲಾಯಿತು. ಮಹಿಳಾ ಉದ್ದಿಮೆದಾರರಿಗೆ ಸಾಲ ಮಂಜೂರಾತಿ ಪತ್ರ ವಿತರಿಸಲಾಯಿತು.
ಸುಮಂಗಲಾ ಮತ್ತು ‌ಕವಿತಾ ಪ್ರಾಥ೯ನೆ ಹಾಡಿದರು. ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್ ಮಂಜುನಾಥ್ ಸ್ವಾಗತಿಸಿದರು.

Related posts

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ : ಹೇಮಚಂದ್ರರಿಗೆ ಬೆಸ್ಟ್ ಲಿಪ್ಟರ್ ಕರ್ನಾಟಕ ಪ್ರಶಸ್ತಿ

Suddi Udaya
error: Content is protected !!