22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

ಬೆಳ್ತಂಗಡಿ: ಸೇವೆ ಯಾವ ರೂಪದಲ್ಲೂ ಬೇಕಾದರು ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ಬಹುಮುಖ‌ ಪ್ರತಿಭೆ,ಸ್ನಾತಕೋತ್ತರ ಪದವಿದಾರ ಚಂದ್ರಹಾಸ ಬಳಂಜ ಕ್ಯಾನ್ಸರ್‌ ಪೀಡಿತರಿಗಾಗಿ ತಮ್ಮ‌ ಕೇಶವನ್ನ ದಾನ‌ ಮಾಡಿದ್ದಾರೆ.

ಯುವ ಶಕ್ತಿ‌ ಸೇವಾ ಪಥ ತಂಡದ ಜೊತೆಗೆ ಸೇರಿಕ್ಕೊಂಡು ತಮ್ಮ‌ ಕೇಶವನ್ನ ದಾನ‌ಮಾಡಿ ಯುವ ಸಮುದಾಯಕ್ಕೆ ಈ‌ ಮುಖೇನ ಆದರ್ಶರಾಗಿದ್ದಾರೆ.‌

ಯುವಕರು ಈ‌ ರೀತಿಯ ಕೆಲಸಗಳನ್ನು ಮಾಡಲು ಆದಷ್ಟು ಮುಂದೆ ಬರಬೇಕು‌ ಮತ್ತು ಇನ್ನಷ್ಟು‌ ಜನರಿಗೆ ಅದು‌ ಸ್ಫೂರ್ತಿಯಾಗಬೇಕು. ಹಾಗು ಇದರಿಂದ ಕ್ಯಾನ್ಸರ್‌ ಪೀಡಿತರಿಗು ಕೂಡ ಹೊಸ ಭರವಸೆಯನ್ನ ತುಂಬುವಲ್ಲಿ‌ ಸಹಕಾರಿಯಾಗುತ್ತದೆ.

ಬಹುಮುಖ‌ ಪ್ರತಿಭೆಯಾಗಿರುವ ಇವರು ತಮ್ಮ‌ ಪ್ರತಿಭೆ‌‌ ಮುಖೇನ‌ ರಾಜ್ಯ‌,ರಾಷ್ಟ್ರ‌ಮಟ್ಟದ‌ ಪ್ರಶಸ್ತಿಗಳನ್ನ ಪಡೆದಿದ್ದು ಒಬ್ಬ ತರಬೇತುದಾರರಾಗಿಯೂ ಶಾಲಾ‌ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ , ಯುವ ಸಮುದಾಯಕ್ಕೆ‌ ಸ್ಫೂರ್ತಿದಾಯಕ ತರಬೇತಿಗಳನ್ನ ನಡೆಸುತ್ತ ಬರುತ್ತಿದ್ದಾರೆ.

ಇವರು ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್ ಬಳಂಜರವರ ಸಹೋದರ.

Related posts

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಸೆ.12 : ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಿರುದ್ಯೋಗಿ ವಿಕಲಚೇತನರ ಉದ್ಯೋಗ ಪೂರ್ವ ಕೌಶಲ್ಯ ಶಿಬಿರ- ಉದ್ಯೋಗ ಆಯ್ಕೆ

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya
error: Content is protected !!