35.1 C
ಪುತ್ತೂರು, ಬೆಳ್ತಂಗಡಿ
April 11, 2025
ಅಪರಾಧ ಸುದ್ದಿಜಿಲ್ಲಾ ಸುದ್ದಿ

ಹಾಡುಹಗಲೇ ರೂ.3.11 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಮನೆಯಲ್ಲಿ ಇರಿಸಿದ್ದ ಬೀಗದಿಂದಲೇ ಮನೆಯ ಬಾಗಿಲು ತೆರೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ಇರಾದಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಗೆ ಮನೆಯ ಮಾಲಕಿ ರೋಹಿಣಿ ದೂರು ನೀಡಿದ್ದಾರೆ.

ರೋಹಿಣಿ ಹಾಗೂ ಅವರ ಗಂಡ ಇಬ್ಬರು ಮನೆಗೆ ಬೀಗ ಹಾಕಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಅದೇ ರೀತಿ ಮಾ.7.ರಂದು ಮನೆಯಿಂದ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದರು. ಕೆಲಸಕ್ಕೆ ಹೋಗುವ ವೇಳೆ ಮನೆಗೆ ಬೀಗ ಹಾಕಿ ಬೀಗದ ಕೀಯನ್ನು ಬಚ್ಚಲು ಕೋಣೆಯಲ್ಲಿ ಇರಿಸಿ ಹೋಗುತ್ತಿದ್ದರು.ನಿನ್ನೆಯೂ ಅದೇ ರೀತಿ ಬೀಗದ ಕೀಯನ್ನು ಬಚ್ಚಲು ಮನೆಯ ಕಿಟಕಿ ಯಲ್ಲಿಟ್ಟು ತೆರಳಿದ್ದರು.

ಸಂಜೆ ಗಂಡ ಹೆಂಡತಿ ಕೆಲಸ ಮುಗಿಸಿ ಮನೆಗೆ ಬಂದು ನೋಡುವಾಗ ಮನೆಗೆ ಬೀಗ ಹಾಕಿತ್ತು.ಬೀಗ ತೆಗೆದು ಮನೆಯ ಒಳಗೆ ಹೋದಾಗ ಕೋಣೆಯಲ್ಲಿದ್ದ ಗೋದ್ರೆಜ್ ನಿಂದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಕೆಳಗೆ ಬಿದ್ದಿತ್ತು.ಗೊದ್ರೆಜ್ ಓಪನ್ ಮಾಡಿ ನೋಡಿದಾಗ ಅದರೊಳಗಿದ್ದ ಚಿನ್ನಾಭರಣಗಳು ಕಳವುವಾಗಿರು
ವುದು ಗಮನಕ್ಕೆ ಬಂದಿದೆ.
ಒಟ್ಟು 3,11,550 ರೂ ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ. ಕಿವಿಯ ಬೆಂಡೋಳೆ ಅಂದಾಜು 10 ಗ್ರಾಂ, 3 ಉಂಗುರಗಳು ಅಂದಾಜು ತೂಕ 8 ಗ್ರಾಂ, ಹವಳದ ಸರ ಅಂದಾಜು ತೂಕ 20 ಗ್ರಾಂ ಹಾಗೂ ಅದರ ಪಕ್ಕದಲ್ಲಿ ಇಟ್ಟಿದ್ದ ಕರಿಮಣಿ ಸರ, ಅಂದಾಜು ತೂಕ 35 ಗ್ರಾಂ, 2 ಕೈಬಳೆಗಳು ಅಂದಾಜು ತೂಕ 20ಗ್ರಾಂ, ಇವುಗಳು ಕಳವಾಗಿದೆ. ಇವುಗಳ ಒಟ್ಟು ತೂಕ 93 ಗ್ರಾಂ ಆಗಿದೆ ಎನ್ನಲಾಗಿದೆ.ಸ್ಥಳಕ್ಕೆ ಗ್ರಾಮಾಂತರ ಎಸ್.ಐ.ಉದಯ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ: ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರಿಂದ, ಮಾಹಿತಿ

Suddi Udaya

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ | ಬೆಳ್ತಂಗಡಯ ಇಬ್ಬರು ಮಂಗಳೂರು ಸಿಸಿಬಿ ಬಲೆಗೆ ರೂ. 3.2 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya
error: Content is protected !!