September 6, 2026
ಅಪರಾಧ ಸುದ್ದಿಜಿಲ್ಲಾ ಸುದ್ದಿ

ಹಾಡುಹಗಲೇ ರೂ.3.11 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಮನೆಯಲ್ಲಿ ಇರಿಸಿದ್ದ ಬೀಗದಿಂದಲೇ ಮನೆಯ ಬಾಗಿಲು ತೆರೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ಇರಾದಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಗೆ ಮನೆಯ ಮಾಲಕಿ ರೋಹಿಣಿ ದೂರು ನೀಡಿದ್ದಾರೆ.

ರೋಹಿಣಿ ಹಾಗೂ ಅವರ ಗಂಡ ಇಬ್ಬರು ಮನೆಗೆ ಬೀಗ ಹಾಕಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಅದೇ ರೀತಿ ಮಾ.7.ರಂದು ಮನೆಯಿಂದ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದರು. ಕೆಲಸಕ್ಕೆ ಹೋಗುವ ವೇಳೆ ಮನೆಗೆ ಬೀಗ ಹಾಕಿ ಬೀಗದ ಕೀಯನ್ನು ಬಚ್ಚಲು ಕೋಣೆಯಲ್ಲಿ ಇರಿಸಿ ಹೋಗುತ್ತಿದ್ದರು.ನಿನ್ನೆಯೂ ಅದೇ ರೀತಿ ಬೀಗದ ಕೀಯನ್ನು ಬಚ್ಚಲು ಮನೆಯ ಕಿಟಕಿ ಯಲ್ಲಿಟ್ಟು ತೆರಳಿದ್ದರು.

ಸಂಜೆ ಗಂಡ ಹೆಂಡತಿ ಕೆಲಸ ಮುಗಿಸಿ ಮನೆಗೆ ಬಂದು ನೋಡುವಾಗ ಮನೆಗೆ ಬೀಗ ಹಾಕಿತ್ತು.ಬೀಗ ತೆಗೆದು ಮನೆಯ ಒಳಗೆ ಹೋದಾಗ ಕೋಣೆಯಲ್ಲಿದ್ದ ಗೋದ್ರೆಜ್ ನಿಂದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಕೆಳಗೆ ಬಿದ್ದಿತ್ತು.ಗೊದ್ರೆಜ್ ಓಪನ್ ಮಾಡಿ ನೋಡಿದಾಗ ಅದರೊಳಗಿದ್ದ ಚಿನ್ನಾಭರಣಗಳು ಕಳವುವಾಗಿರು
ವುದು ಗಮನಕ್ಕೆ ಬಂದಿದೆ.
ಒಟ್ಟು 3,11,550 ರೂ ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ. ಕಿವಿಯ ಬೆಂಡೋಳೆ ಅಂದಾಜು 10 ಗ್ರಾಂ, 3 ಉಂಗುರಗಳು ಅಂದಾಜು ತೂಕ 8 ಗ್ರಾಂ, ಹವಳದ ಸರ ಅಂದಾಜು ತೂಕ 20 ಗ್ರಾಂ ಹಾಗೂ ಅದರ ಪಕ್ಕದಲ್ಲಿ ಇಟ್ಟಿದ್ದ ಕರಿಮಣಿ ಸರ, ಅಂದಾಜು ತೂಕ 35 ಗ್ರಾಂ, 2 ಕೈಬಳೆಗಳು ಅಂದಾಜು ತೂಕ 20ಗ್ರಾಂ, ಇವುಗಳು ಕಳವಾಗಿದೆ. ಇವುಗಳ ಒಟ್ಟು ತೂಕ 93 ಗ್ರಾಂ ಆಗಿದೆ ಎನ್ನಲಾಗಿದೆ.ಸ್ಥಳಕ್ಕೆ ಗ್ರಾಮಾಂತರ ಎಸ್.ಐ.ಉದಯ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

Suddi Udaya

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಕ್ಕೆ ಪೂಣ೯ ಸಹಕಾರ: ಡಾ. ಹೆಗ್ಗಡೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

Suddi Udaya

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya

ಬಂದಾರು: ಕರುವಿನ ಮೇಲೆ ಚಿರತೆ ದಾಳಿ

Suddi Udaya
error: Content is protected !!