23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಜಿಲ್ಲಾ ಸುದ್ದಿ

ಹಾಡುಹಗಲೇ ರೂ.3.11 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಮನೆಯಲ್ಲಿ ಇರಿಸಿದ್ದ ಬೀಗದಿಂದಲೇ ಮನೆಯ ಬಾಗಿಲು ತೆರೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ಇರಾದಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಗೆ ಮನೆಯ ಮಾಲಕಿ ರೋಹಿಣಿ ದೂರು ನೀಡಿದ್ದಾರೆ.

ರೋಹಿಣಿ ಹಾಗೂ ಅವರ ಗಂಡ ಇಬ್ಬರು ಮನೆಗೆ ಬೀಗ ಹಾಕಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಅದೇ ರೀತಿ ಮಾ.7.ರಂದು ಮನೆಯಿಂದ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದರು. ಕೆಲಸಕ್ಕೆ ಹೋಗುವ ವೇಳೆ ಮನೆಗೆ ಬೀಗ ಹಾಕಿ ಬೀಗದ ಕೀಯನ್ನು ಬಚ್ಚಲು ಕೋಣೆಯಲ್ಲಿ ಇರಿಸಿ ಹೋಗುತ್ತಿದ್ದರು.ನಿನ್ನೆಯೂ ಅದೇ ರೀತಿ ಬೀಗದ ಕೀಯನ್ನು ಬಚ್ಚಲು ಮನೆಯ ಕಿಟಕಿ ಯಲ್ಲಿಟ್ಟು ತೆರಳಿದ್ದರು.

ಸಂಜೆ ಗಂಡ ಹೆಂಡತಿ ಕೆಲಸ ಮುಗಿಸಿ ಮನೆಗೆ ಬಂದು ನೋಡುವಾಗ ಮನೆಗೆ ಬೀಗ ಹಾಕಿತ್ತು.ಬೀಗ ತೆಗೆದು ಮನೆಯ ಒಳಗೆ ಹೋದಾಗ ಕೋಣೆಯಲ್ಲಿದ್ದ ಗೋದ್ರೆಜ್ ನಿಂದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಕೆಳಗೆ ಬಿದ್ದಿತ್ತು.ಗೊದ್ರೆಜ್ ಓಪನ್ ಮಾಡಿ ನೋಡಿದಾಗ ಅದರೊಳಗಿದ್ದ ಚಿನ್ನಾಭರಣಗಳು ಕಳವುವಾಗಿರು
ವುದು ಗಮನಕ್ಕೆ ಬಂದಿದೆ.
ಒಟ್ಟು 3,11,550 ರೂ ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ. ಕಿವಿಯ ಬೆಂಡೋಳೆ ಅಂದಾಜು 10 ಗ್ರಾಂ, 3 ಉಂಗುರಗಳು ಅಂದಾಜು ತೂಕ 8 ಗ್ರಾಂ, ಹವಳದ ಸರ ಅಂದಾಜು ತೂಕ 20 ಗ್ರಾಂ ಹಾಗೂ ಅದರ ಪಕ್ಕದಲ್ಲಿ ಇಟ್ಟಿದ್ದ ಕರಿಮಣಿ ಸರ, ಅಂದಾಜು ತೂಕ 35 ಗ್ರಾಂ, 2 ಕೈಬಳೆಗಳು ಅಂದಾಜು ತೂಕ 20ಗ್ರಾಂ, ಇವುಗಳು ಕಳವಾಗಿದೆ. ಇವುಗಳ ಒಟ್ಟು ತೂಕ 93 ಗ್ರಾಂ ಆಗಿದೆ ಎನ್ನಲಾಗಿದೆ.ಸ್ಥಳಕ್ಕೆ ಗ್ರಾಮಾಂತರ ಎಸ್.ಐ.ಉದಯ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya
error: Content is protected !!