25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

ಬೆಳ್ತಂಗಡಿ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ, ತಾಲೂಕು ಮಹಿಳಾ‌ ಮಂಡಲಗಳ ಒಕ್ಕೂಟ ಬೆಳ್ತಂಗಡಿ, ಮಹಿಳಾ ವೃಂದ ಬೆಳ್ತಂಗಡಿ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನ ಮಹಿಳಾ ವೃಂದ ಸಭಾಂಗಣದಲ್ಲಿ ಆಚರಿಸಲಾಯಿತು.

ಇಂದು ಮಹಿಳೆಯರು ತಮ್ಮ ಬದುಕನ್ನ ಆದರ್ಶದಾಯಕವಾಗಿ ನಡೆಸಲು ಶಕ್ತರಾಗಿದ್ದಾರೆ, ಎಲ್ಲಾ ಕ್ಷೇತ್ರದಲ್ಲು ಕೂಡ ತಮ್ಮ ಛಾಪನ್ನ ಮೂಡಿಸಿ ಮಹಿಳೆ ಇಂದು ಸಮಾಜದಲ್ಲಿ ತಮ್ಮ ಸ್ಥಾನವನ್ನ ಪಡೆದುಕ್ಕೊಂಡು ಮುನ್ನುಗ್ಗುತ್ತಿದ್ದಾಳೆ, ಇದೇ ರೀತಿ‌ ಮಹಿಳೆ ರಾಜಕೀಯ, ಶೈಕ್ಷಣಿಕ, ಆರ್ಥಿಕ ನೀತಿ, ಕ್ರೀಡೆ ಎಲ್ಲಾ ಕ್ಷೇತ್ರದಲ್ಲು ಚಿಂತನೆಯನ್ನ ಮಾಡಬೇಕೆಂದು ರೋಟರಿ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷರಾದ ಮನೋರಮ ಭಟ್ ಅವರು ಸ್ಫೂರ್ತಿದಾಯಕ ಮಾತುಗಳನ್ನ ಆಡಿದರು.

ಕಾರ್ಯಕ್ರಮದಲ್ಲಿ ತಾಲೂಕಿನ‌ ಸಾಧಕರಾದ ಹಿರಿಯರು ಶುಶ್ರೂಕಿಯಾಗಿ ಸಾವಿರಕ್ಕೂ ಹೆಚ್ಚು ಹೆರಿಗೆಗಳನ್ನ ಮಾಡಿಸಿ ನಿವೃತ್ತರಾದರು ತಮ್ಮ‌ ಸೇವೆಯನ್ನು ನೀಡುತ್ತಿರುವ ಶ್ರೀಮತಿ ದೇವಮ್ಮ ಮತ್ತು ಉಜಿರೆ ಬೆನಕ್ ಆಸ್ಪತ್ರೆಯ ಕಿರಿಯ ಸರ್ಜನ್, ಇತ್ತಿಚ್ಚೆಗೆ ಯಶಸ್ವಿ ಕಿರು ರಂಧ್ರ ಶಸ್ತ್ರಚಿಕಿತ್ಸೆಯ ಮೂಲಕ 1.6 ಕೆ.ಜಿ ಗೆಡ್ಡೆಯನ್ನ ಹೊರತೆಗೆದ ಸಾಧಕಿ ಡಾ.‌ಅಂಕಿತಾ ಭಟ್ ಅವರಿಗೆ ‘ಸ್ಪೂರ್ತಿ -2023’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನಿಕಟಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ.ಎಸ್ , ಮಹಿಳಾ ವೃಂದದ ಅಧ್ಯಕ್ಷರಾದ ಆಶಾ ಸತೀಶ್ , ಮಹಿಳಾ ಒಕ್ಕೂಟ ಅಧ್ಯಕ್ಷರಾದ ಸವಿತಾ ಜಯದೇವ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಜೇಸಿಐ ಬೆಳ್ತಂಗಡಿ ಮಂಜುಶ್ರಿಯ ಮಹಿಳಾ ವಿಭಾಗದ ಸಂಯೋಜಕಿ ಮಮಿತಾ ಸುಧೀರ್ ಅಧ್ಯಕ್ಷತೆಯನ್ನ ವಹಿಸಿದ್ದರು.

ಜೆಸಿಐ ಅಧ್ಯಕ್ಷರಾದ ಶಂಕರ್ ರಾವ್ ಅತಿಥಿಗಳನ್ನ ಸ್ವಾಗತಿಸಿ, ಹೇಮಾವತಿ.ಕೆ ಅತಿಥಿಗಳನ್ನ ವೇದಿಕೆಗೆ ಆಹ್ವಾನಿಸಿ, ಮಧುರಾ ರಾಘವ್ ಜೇಸಿ ವಾಣಿ ವಾಚಿಸಿ, ಸುಭಾಷಿಣಿ‌ ಸನ್ಮಾನ ಪತ್ರ ವಾಚಿಸಿ, ಮಹಿಳಾ ವೃಂದದ ಉಮಾರಾವ್ ಧನ್ಯವಾದವಿತ್ತರು.

ವೇದಿಕೆಯಲ್ಲಿ ಜೇಸಿಐ ಬೆಳ್ತಂಗಡಿ ಮಂಜುಶ್ರಿಯ ಕಾರ್ಯದರ್ಶಿ‌ ಸುಧೀರ್ ಕೆ.ಎನ್ ಉಪಸ್ಥಿತರಿದ್ದು, ಕಾರ್ಯಕ್ರಮದಲ್ಲಿ ಜೇಸಿಐ ಬೆಳ್ತಂಗಡಿಯ ಪುರ್ವಾಧ್ಯಕರಾದ ಚಿದಾನಂದ ಇಡ್ಯಾ, ಕಿರಣ್ ಕುಮಾರ್ ಶೆಟ್ಟಿ, ನಾರಾಯಣ ಶೆಟ್ಟಿ, ಸಂತೋಷ್ ಕುಮಾರ್ ಜೈನ್, ಅಶೋಕ್ ಕುಮಾರ್ ಎಮ್.ಪಿ ಉಪಸ್ಥಿತರಿದ್ದರು.

Related posts

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya
error: Content is protected !!