April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಈ ಸಾಲಿನ ಶೈಕ್ಷಣಿಕ ಅವಧಿಯಲ್ಲಿ ನೀಡಲಾದ ರಾಷ್ಟ್ರಪ್ರಶಸ್ತಿ, ರಾಜ್ಯ ಪ್ರಶಸ್ತಿ, ಜಿಲ್ಲಾ ಪ್ರಶಸ್ತಿಗಳನ್ನು ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ ಎಸ್ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿಯಾದ ಶೈಲೈಶ್ ತೋಸರ್, ಹಾಗೂ ವಕೀಲರ ಸಂಘದ ಸಂಸ್ಕೃತಿಕ ಕಾರ್ಯದರ್ಶಿಯಾದ ಮಮ್ತಾಜ್ ಬೇಗಂ ಉಪಸ್ಥಿತರಿದ್ದರು.
ವಕೀಲರ ಸಂಘದ ಅಧ್ಯಕ್ಷರು ಮಾತಾಡಿ ಸ್ಕೌಟ್ ಗೈನ್ ಬೆಳವಣಿಗೆಯ ಬಗ್ಗೆ ಪ್ರಸಂಸೆಯನ್ನು ವ್ಯಕ್ತಪಡಿಸಿದರು. ಕಾರ್ಯದರ್ಶಿ ಯಾದ ಶೈಲೇಶ್ ತೋಸರ್ ರವರು ಮಾತಾಡಿ ಮಕ್ಕಳಿಗೆಲ್ಲ ಶುಭ ಹಾರೈಸಿದರು.
‌‌ ಮುಖ್ಯ ಶಿಕ್ಷಕಿ ಶ್ರೀಮತಿoo ಹೇಮಲತಾ ಎಂ ಆರ್ ಮಕ್ಕಳೆಲ್ಲರಿಗೂ ಶುಭಾಶಯವನ್ನು ಕೋರಿದರು.
ಸ್ಕೌಟ್ ಗೈಡ್ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಆಯೋಜಿಸಿ ಮಕ್ಕಳಿಗೆಲ್ಲ ತರಬೇತಿಯನ್ನು ನೀಡುತ್ತಿದ್ದಾರೆ.
‌ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಸಂಪೂರ್ಣ ಸಹಕಾರವನ್ನು ನೀಡಿದರು.
ರಾಜ್ಯ ಪುರಸ್ಕೃತ ಗೈಡ್ ವಿದ್ಯಾರ್ಥಿ ಕುಮಾರಿ ನಿಧಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತ , ಧನ್ಯವಾದನ್ನು ನೀಡಿದರು.

Related posts

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya
error: Content is protected !!