25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಜಿಲ್ಲಾ ಸುದ್ದಿ

ಹಾಡುಹಗಲೇ ರೂ.3.11 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಮನೆಯಲ್ಲಿ ಇರಿಸಿದ್ದ ಬೀಗದಿಂದಲೇ ಮನೆಯ ಬಾಗಿಲು ತೆರೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ಇರಾದಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಗೆ ಮನೆಯ ಮಾಲಕಿ ರೋಹಿಣಿ ದೂರು ನೀಡಿದ್ದಾರೆ.

ರೋಹಿಣಿ ಹಾಗೂ ಅವರ ಗಂಡ ಇಬ್ಬರು ಮನೆಗೆ ಬೀಗ ಹಾಕಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಅದೇ ರೀತಿ ಮಾ.7.ರಂದು ಮನೆಯಿಂದ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದರು. ಕೆಲಸಕ್ಕೆ ಹೋಗುವ ವೇಳೆ ಮನೆಗೆ ಬೀಗ ಹಾಕಿ ಬೀಗದ ಕೀಯನ್ನು ಬಚ್ಚಲು ಕೋಣೆಯಲ್ಲಿ ಇರಿಸಿ ಹೋಗುತ್ತಿದ್ದರು.ನಿನ್ನೆಯೂ ಅದೇ ರೀತಿ ಬೀಗದ ಕೀಯನ್ನು ಬಚ್ಚಲು ಮನೆಯ ಕಿಟಕಿ ಯಲ್ಲಿಟ್ಟು ತೆರಳಿದ್ದರು.

ಸಂಜೆ ಗಂಡ ಹೆಂಡತಿ ಕೆಲಸ ಮುಗಿಸಿ ಮನೆಗೆ ಬಂದು ನೋಡುವಾಗ ಮನೆಗೆ ಬೀಗ ಹಾಕಿತ್ತು.ಬೀಗ ತೆಗೆದು ಮನೆಯ ಒಳಗೆ ಹೋದಾಗ ಕೋಣೆಯಲ್ಲಿದ್ದ ಗೋದ್ರೆಜ್ ನಿಂದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಕೆಳಗೆ ಬಿದ್ದಿತ್ತು.ಗೊದ್ರೆಜ್ ಓಪನ್ ಮಾಡಿ ನೋಡಿದಾಗ ಅದರೊಳಗಿದ್ದ ಚಿನ್ನಾಭರಣಗಳು ಕಳವುವಾಗಿರು
ವುದು ಗಮನಕ್ಕೆ ಬಂದಿದೆ.
ಒಟ್ಟು 3,11,550 ರೂ ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ. ಕಿವಿಯ ಬೆಂಡೋಳೆ ಅಂದಾಜು 10 ಗ್ರಾಂ, 3 ಉಂಗುರಗಳು ಅಂದಾಜು ತೂಕ 8 ಗ್ರಾಂ, ಹವಳದ ಸರ ಅಂದಾಜು ತೂಕ 20 ಗ್ರಾಂ ಹಾಗೂ ಅದರ ಪಕ್ಕದಲ್ಲಿ ಇಟ್ಟಿದ್ದ ಕರಿಮಣಿ ಸರ, ಅಂದಾಜು ತೂಕ 35 ಗ್ರಾಂ, 2 ಕೈಬಳೆಗಳು ಅಂದಾಜು ತೂಕ 20ಗ್ರಾಂ, ಇವುಗಳು ಕಳವಾಗಿದೆ. ಇವುಗಳ ಒಟ್ಟು ತೂಕ 93 ಗ್ರಾಂ ಆಗಿದೆ ಎನ್ನಲಾಗಿದೆ.ಸ್ಥಳಕ್ಕೆ ಗ್ರಾಮಾಂತರ ಎಸ್.ಐ.ಉದಯ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

Suddi Udaya

ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಓಡಿಲ್ನಾಳ ಸಂಬೋಳ್ಯದ ಸುಮಂತ್‌ ಶವದ ಪರೀಕ್ಷಾ ವರದಿ: ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ: ದ.ಕ ಎಸ್.ಪಿ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya
error: Content is protected !!