25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

ಬೆಳ್ತಂಗಡಿ: ಭರವಸೆಯ ನಾಯಕತ್ವ, ಸುಸ್ಥಿರ ಅಭಿವೃದ್ಧಿ, ರಾಷ್ಟ್ರೀಯವಾದದ ಸಿದ್ಧಾಂತಗಳನ್ನು ಆಧಾರವಾಗಿಟ್ಟುಕೊಂಡು ಕಾರ್ಯ ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ”ಯ ಅಂಗವಾಗಿ ನಡೆಯಲಿರುವ “ವಿಜಯ ಸಂಕಲ್ಪ ರಥಯಾತ್ರೆ” ಮಾ. 12 ಆದಿತ್ಯವಾರ ಪೂರ್ವಾಹ್ನ 10 ಗಂಟೆಗೆ ಸರಿಯಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಲಿದೆ.


ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾದ ಮೂಲಕ “ವಿಜಯ ಸಂಕಲ್ಪ ಯಾತ್ರೆ”ಯ ಯಾತ್ರೆ ಸಾಗಲಿದೆ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಎಲ್ಲಾ ಪೂರ್ವ ತಯಾರಿಯನ್ನು ನಡೆಸಲಾಗಿದ್ದು, ನಗರವನ್ನು ಬಿಜೆಪಿ ಪತಾಕೆ ಹಾಗೂ ತೋರಣಗಳಿಂದ ಶೃಂಗರಿಸಲಾಗಿದೆ. ಯಾತ್ರೆಯಲ್ಲಿ ಮಾಜಿ ಸಚಿವರಾದಈಶ್ವರಪ್ಪ, ಕಂದಾಯ ಸಚಿವರಾದ ಅಶೋಕ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸಂಸದ ನಳಿನ್‌ಕುಮಾರ್‌ ಕಟೀಲ್‌, ರಾಜ್ಯ, ಜಿಲ್ಲೆ ಹಾಗೂ ತಾಲೂಕಿನ ಪಕ್ಷದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Related posts

ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಸಿಕ ಸಭೆ, ಬೆಳ್ತಂಗಡಿಯಲ್ಲಿ ಒಂದು ವೃತ್ತಕ್ಕೆ ವಸಂತ ಬಂಗೇರರ ಹೆಸರಿಟ್ಟು ಪುತ್ಥಳಿ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya
error: Content is protected !!