27.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

ಬೆಳ್ತಂಗಡಿ: ಭರವಸೆಯ ನಾಯಕತ್ವ, ಸುಸ್ಥಿರ ಅಭಿವೃದ್ಧಿ, ರಾಷ್ಟ್ರೀಯವಾದದ ಸಿದ್ಧಾಂತಗಳನ್ನು ಆಧಾರವಾಗಿಟ್ಟುಕೊಂಡು ಕಾರ್ಯ ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ”ಯ ಅಂಗವಾಗಿ ನಡೆಯಲಿರುವ “ವಿಜಯ ಸಂಕಲ್ಪ ರಥಯಾತ್ರೆ” ಮಾ. 12 ಆದಿತ್ಯವಾರ ಪೂರ್ವಾಹ್ನ 10 ಗಂಟೆಗೆ ಸರಿಯಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಲಿದೆ.


ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾದ ಮೂಲಕ “ವಿಜಯ ಸಂಕಲ್ಪ ಯಾತ್ರೆ”ಯ ಯಾತ್ರೆ ಸಾಗಲಿದೆ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಎಲ್ಲಾ ಪೂರ್ವ ತಯಾರಿಯನ್ನು ನಡೆಸಲಾಗಿದ್ದು, ನಗರವನ್ನು ಬಿಜೆಪಿ ಪತಾಕೆ ಹಾಗೂ ತೋರಣಗಳಿಂದ ಶೃಂಗರಿಸಲಾಗಿದೆ. ಯಾತ್ರೆಯಲ್ಲಿ ಮಾಜಿ ಸಚಿವರಾದಈಶ್ವರಪ್ಪ, ಕಂದಾಯ ಸಚಿವರಾದ ಅಶೋಕ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸಂಸದ ನಳಿನ್‌ಕುಮಾರ್‌ ಕಟೀಲ್‌, ರಾಜ್ಯ, ಜಿಲ್ಲೆ ಹಾಗೂ ತಾಲೂಕಿನ ಪಕ್ಷದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Related posts

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!