25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

ಬೆಳ್ತಂಗಡಿ: ಭರವಸೆಯ ನಾಯಕತ್ವ, ಸುಸ್ಥಿರ ಅಭಿವೃದ್ಧಿ, ರಾಷ್ಟ್ರೀಯವಾದದ ಸಿದ್ಧಾಂತಗಳನ್ನು ಆಧಾರವಾಗಿಟ್ಟುಕೊಂಡು ಕಾರ್ಯ ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ”ಯ ಅಂಗವಾಗಿ ನಡೆಯಲಿರುವ “ವಿಜಯ ಸಂಕಲ್ಪ ರಥಯಾತ್ರೆ” ಮಾ. 12 ಆದಿತ್ಯವಾರ ಪೂರ್ವಾಹ್ನ 10 ಗಂಟೆಗೆ ಸರಿಯಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಲಿದೆ.


ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾದ ಮೂಲಕ “ವಿಜಯ ಸಂಕಲ್ಪ ಯಾತ್ರೆ”ಯ ಯಾತ್ರೆ ಸಾಗಲಿದೆ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಎಲ್ಲಾ ಪೂರ್ವ ತಯಾರಿಯನ್ನು ನಡೆಸಲಾಗಿದ್ದು, ನಗರವನ್ನು ಬಿಜೆಪಿ ಪತಾಕೆ ಹಾಗೂ ತೋರಣಗಳಿಂದ ಶೃಂಗರಿಸಲಾಗಿದೆ. ಯಾತ್ರೆಯಲ್ಲಿ ಮಾಜಿ ಸಚಿವರಾದಈಶ್ವರಪ್ಪ, ಕಂದಾಯ ಸಚಿವರಾದ ಅಶೋಕ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸಂಸದ ನಳಿನ್‌ಕುಮಾರ್‌ ಕಟೀಲ್‌, ರಾಜ್ಯ, ಜಿಲ್ಲೆ ಹಾಗೂ ತಾಲೂಕಿನ ಪಕ್ಷದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Related posts

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜ ಭೇಟಿ : ಅಯೋಧ್ಯೆಯ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya
error: Content is protected !!